ಭಾರತೀಯ ಚಿತ್ರರಂಗದ ಮಧುರ ಧ್ವನಿ ಸುಮನ್ ಕಲ್ಯಾಣಪುರ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಆಪ್ತ ಒಡನಾಡಿ ಹಾಗೂ ಲೇಖಕಿ ಮಂಗಲಾ ಖಾಡಿಲ್ಕರ ಈ ವಿಷಯವನ್ನು ಖಚಿತಪಡಿಸಿದ್ದು, ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ, ಅಖಿಲೇಶ ಮಲಸಹೋದರ ಪ್ರತೀಕ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ ಯಾದವ್ ಅವರ ಸಹೋದರ ಪ್ರತೀಕ ಯಾದವ್ (38) ಅವರು ಬುಧವಾರ ಲಕ್ನೋದಲ್ಲಿ ನಿಧನರಾಗಿದ್ದಾರೆ. ಪ್ರತೀಕ್ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಪತಿ. ಮೂಲಗಳ ಪ್ರಕಾರ, ಪ್ರತೀಕ ಅವರನ್ನು ಬುಧವಾರ ಮುಂಜಾನೆ ಸುಮಾರು … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜನಪರ ಹೋರಾಟಗಾರ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಹಿಚ್ಕಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರಬಂಧು ಬಳಗದವರನ್ನು ಅಗಲಿದ್ದಾರೆ. ಸಜ್ಜನಿಕೆ, ಸರಳತೆ … Continued

ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ : ಎಂಟು ದಶಕಗಳ ಹಾಡಿನ ಪಯಣ ಅಂತ್ಯ

ನವದೆಹಲಿ: ಭಾರತೀಯ ಚಿತ್ರರಂಗದ ದಂತಕಥೆ, ಬಹುಮುಖ ಪ್ರತಿಭೆಯ ಗಾಯಕಿ ಆಶಾ ಭೋಂಸ್ಲೆ (92) ಅವರು ಅಂಗಾಂಗ ವೈಫಲ್ಯದಿಂದಾಗಿ ಭಾನುವಾರ (ಏಪ್ರಿಲ್ 12) ನಿಧನರಾದರು. ಈ ವಿಷಯವನ್ನು ಅವರ ಕುಟುಂಬ ಸದಸ್ಯರು ಮತ್ತು ವೈದ್ಯರು ಖಚಿತಪಡಿಸಿದ್ದಾರೆ. ಆಶಾ ಅವರ ಪುತ್ರ ಆನಂದ ಭೋಂಸ್ಲೆ ಈ ಬಗ್ಗೆ ಮಾಹಿತಿ ನೀಡಿದ್ದು, “ನನ್ನ ತಾಯಿ ಇಂದು ನಮ್ಮನ್ನು ಅಗಲಿದ್ದಾರೆ. ಸಾರ್ವಜನಿಕರು … Continued

ಖ್ಯಾತ ಉದ್ಯಮಿ, ರೇಮಂಡ್ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ನಿಧನ

ಮುಂಬೈ: ಭಾರತದ ಖ್ಯಾತ ಉದ್ಯಮಿ, ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಅವರು ಶನಿವಾರ ಸಂಜೆ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಉದ್ಯಮ, ವಿಮಾನಯಾನ ಮತ್ತು ಜವಳಿ ಉದ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ದಾರ್ಶನಿಕ ಉದ್ಯಮಿ ಮತ್ತು ಲೋಕೋಪಕಾರಿ ಎಂದು ಗುರುತಿಸಿಕೊಂಡಿದ್ದರು. ಅವರ ಪುತ್ರ ಹಾಗೂ … Continued

ಯಕ್ಷಗಾನದ ಮೇರು ಕಲಾವಿದ ಗೋವಿಂದ ಭಟ್‌ ಇನ್ನಿಲ್ಲ

ಮಂಗಳೂರು :  ತೆಂಕುತಿಟ್ಟು ಶೈಲಿಯ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ. ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೆದ್ದೂರಿನ ತಮ್ಮ  ಪುತ್ರನ‌ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು … Continued

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕ ಸದಸ್ಯ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಂಬಿಕಸ್ತ ಒಡನಾಡಿ ಹಾಗೂ ಪಕ್ಷದ ಪ್ರಧಾನ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಮುಕುಲ್‌ ರಾಯ್, … Continued

ಫುಟ್ಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಶಿಲ್ಲಾಂಗ್ ಸಂಸದ ರಿಕಿ ಸಿಂಗ್ಕೋನ್ ನಿಧನ

ಶಿಲ್ಲಾಂಗ್: ಮೇಘಾಲಯದ ‘ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ’ (VPP) ನಾಯಕ ಹಾಗೂ ಶಿಲ್ಲಾಂಗ್ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ರಿಕಿ ಎಜೆ ಸಿಂಗ್ಕೋನ್ (Ricky AJ Syngkon) ಅವರು ಗುರುವಾರ ಸಂಜೆ ಫುಟ್ಬಾಲ್ ಆಡುತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದು ನಿಧನರಾಗಿದ್ದಾರೆ ಈ ಅನಿರೀಕ್ಷಿತ ಘಟನೆಯು ಇಡೀ ರಾಜ್ಯದಾದ್ಯಂತ ತೀವ್ರ ಆಘಾತವನ್ನುಂಟುಮಾಡಿದೆ. ವರದಿಗಳ ಪ್ರಕಾರ, ಸಿಂಗ್ಕೋನ್ … Continued