ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued

ವಿಶ್ವದ ಅತ್ಯಂತ ಹಿರಿಯ ಸಂಯೋಜಿತ ಅವಳಿಗಳು 62ನೇ ವಯಸ್ಸಿನಲ್ಲಿ ನಿಧನ

ಪ್ರಪಂಚದ ಅತ್ಯಂತ ಹಿರಿಯ ಸಂಯೋಜಿತ ಅವಳಿಗಳು ತಮ್ಮ 62ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಲೋರಿ ಮತ್ತು ಜಾರ್ಜ್ ಶಾಪೆಲ್ ಏಪ್ರಿಲ್ 7 ರಂದು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಲೈಬೆನ್ಸ್‌ಪರ್ಗರ್ ಫ್ಯೂನರಲ್ ಹೋಮ್ಸ್ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ಸಂತಾಪ ಸೂಚಿಸಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಹ ಪ್ರಕಟಣೆಯಲ್ಲಿ ಅವರ ಮರಣವನ್ನು ದೃಢಪಡಿಸಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ … Continued

ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ವಿಧಿವಶ

ಬೆಂಗಳೂರು: ನಾಡಿನ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ (67) ಅವರು ಶುಕ್ರವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್ ಕೆ ಜೈನ್ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಕುಮಟಾ: ಮಿರ್ಜಾನ-ಕೋಡ್ಕಣಿಯ ವೈದ್ಯ ಡಾ. ರತ್ನಾಕರ ಶಾನಭಾಗ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ-ಕೋಡ್ಕಣಿಯ ಹೆಸರಾಂತ ವೈದ್ಯರಾಗಿದ್ದ ಡಾ. ರತ್ನಾಕರ ರಾಮ ಶಾನಭಾಗ (77) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ವಾರ ಮಿರ್ಜಾನ ಬಳಿ ನಡೆದ ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಪಾರ … Continued

ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

ಬಾಗಲಕೋಟೆ : ಹಿರಿಯ ಪತ್ರಕರ್ತ ಬಾಗಲಕೋಟೆಯ ರಾಮ ಮನಗೂಳಿ ಅವರು ಇಂದು ಶುಕ್ರವಾರ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, … Continued

ಖ್ಯಾತ ಗಜಲ್‌ ಗಾಯಕ ಪಂಕಜ ಉಧಾಸ್ ನಿಧನ

ಮುಂಬೈ: ಖ್ಯಾತ ಗಜಲ್‌ ಗಾಯಕ ಪಂಕಜ ಉಧಾಸ್ ಅವರು 72 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೋಮವಾರ ಫೆಬ್ರವರಿ 26 ರಂದು ಬೆಳಿಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ನಿಧನರಾದರು ಎಂದು ಅವರ ತಂಡ ದೃಢಪಡಿಸಿದೆ. “ಪಂಕಜ್ ಸರ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ಅವರು ಆರೋಗ್ಯವಾಗಿರಲಿಲ್ಲ. ಅವರು ಇಂದು (ಫೆಬ್ರವರಿ … Continued

ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬೆಂಗಲೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಾ ವೆಂಕಟಪ್ಪ ನಾಯಕ ಅವರು ಇಬ್ಬರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕೆಲವು ದಿನಗಳ … Continued

ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ ಜೋಶಿ ನಿಧನ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭೆ ಮಾಜಿ ಸ್ಪೀಕರ್‌ ಮನೋಹರ ಜೋಶಿ ಅವರು ಮುಂಬೈ ಆಸ್ಪತ್ರೆಯಲ್ಲಿ ಇಂದು, ಶುಕ್ರವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಜೋಶಿ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು, ಶುಕ್ರವಾರ ನಡೆಯಲಿದೆ. ಜೋಶಿ ಅವರನ್ನು ಹೃದಯಾಘಾತದ ಕಾರಣಕ್ಕೆ ಎರಡು ದಿನಗಳ ಹಿಂದೆ ಬುಧವಾರ ಮುಂಬೈನ … Continued