ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

ಬಾಗಲಕೋಟೆ : ಹಿರಿಯ ಪತ್ರಕರ್ತ ಬಾಗಲಕೋಟೆಯ ರಾಮ ಮನಗೂಳಿ ಅವರು ಇಂದು ಶುಕ್ರವಾರ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, … Continued

ಖ್ಯಾತ ಗಜಲ್‌ ಗಾಯಕ ಪಂಕಜ ಉಧಾಸ್ ನಿಧನ

ಮುಂಬೈ: ಖ್ಯಾತ ಗಜಲ್‌ ಗಾಯಕ ಪಂಕಜ ಉಧಾಸ್ ಅವರು 72 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೋಮವಾರ ಫೆಬ್ರವರಿ 26 ರಂದು ಬೆಳಿಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ನಿಧನರಾದರು ಎಂದು ಅವರ ತಂಡ ದೃಢಪಡಿಸಿದೆ. “ಪಂಕಜ್ ಸರ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ಅವರು ಆರೋಗ್ಯವಾಗಿರಲಿಲ್ಲ. ಅವರು ಇಂದು (ಫೆಬ್ರವರಿ … Continued

ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬೆಂಗಲೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಾ ವೆಂಕಟಪ್ಪ ನಾಯಕ ಅವರು ಇಬ್ಬರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕೆಲವು ದಿನಗಳ … Continued

ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ ಜೋಶಿ ನಿಧನ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭೆ ಮಾಜಿ ಸ್ಪೀಕರ್‌ ಮನೋಹರ ಜೋಶಿ ಅವರು ಮುಂಬೈ ಆಸ್ಪತ್ರೆಯಲ್ಲಿ ಇಂದು, ಶುಕ್ರವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಜೋಶಿ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು, ಶುಕ್ರವಾರ ನಡೆಯಲಿದೆ. ಜೋಶಿ ಅವರನ್ನು ಹೃದಯಾಘಾತದ ಕಾರಣಕ್ಕೆ ಎರಡು ದಿನಗಳ ಹಿಂದೆ ಬುಧವಾರ ಮುಂಬೈನ … Continued

ಖ್ಯಾತ ಕಾನೂನು ಪಟು ಫಾಲಿ ಎಸ್ ನಾರಿಮನ್ ನಿಧನ

ನವದೆಹಲಿ: ಪ್ರಖ್ಯಾತ ಸಾಂವಿಧಾನಿಕ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರು ಬುಧವಾರ ನವದೆಹಲಿಯಲ್ಲಿ 95 ನೇ ವಯಸ್ಸಿನಲ್ಲಿ ನಿಧನರಾದರು. ಭಾರತದ ಕಾನೂನು ಕ್ಷೇತ್ರದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದ ನಾರಿಮನ್ ಅವರು ಕಾನೂನು ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರು ಕೃಷ್ಣಾ ಜಲವಿವಾದ ಸೇರಿದಂತೆ ಹಲವಾರು ಜಲ ವಿವಾದಗಳಲ್ಲಿ ಕರ್ನಾಟಕದ ಪರ ವಾದಿಸಿ … Continued

ಖ್ಯಾತ ಸಾಹಿತಿ ಕೆ.ಟಿ. ಗಟ್ಟಿ ಇನ್ನಿಲ್ಲ

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕರ್ನಾಟಕದ ಗಡಿಭಾಗವಾದ ಕೇರಳದ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯಲ್ಲಿ ನೆಲೆಸಿದ್ದರು. ನಂತರ ಮಂಗಳೂರಿಗೆ ಬಂದಿದ್ದರು. ೧೭ನೇ … Continued

ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ ನಿಧನ

ನವದೆಹಲಿ: ಜೈನ ಸಮುದಾಯದ ದಾರ್ಶನಿಕ ಮುನಿ, ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜ ಅವರು ಛತ್ತೀಸಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಜಿನೈಕ್ಯರಾಗಿದ್ದಾರೆ. ವಿದ್ಯಾಸಾಗರ ಮಹಾರಾಜರು ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಹಾಗೂ ಮೂರು ದಿನಗಳ ಹಿಂದೆ ಸಮಾಧಿ ಪ್ರಕ್ರಿಯೆ ಅಂದರೆ ‘ಸಲ್ಲೇಖನ’ ವ್ರತ ಪ್ರಾರಂಭಿಸಿ ಆಹಾರ ಮತ್ತು ನೀರನ್ನು ಸಂಪೂರ್ಣವಾಗಿ ತ್ಯಜಿಸಿದ್ದರು. ಇದಾದ ಬಳಿಕ ಶನಿವಾರ ರಾತ್ರಿ … Continued

ಅಂಕೋಲಾ: ಖ್ಯಾತ ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ

ಅಂಕೋಲಾ : ಖ್ಯಾತಸಾಹಿತಿ, ಪ್ರಕಾಶಕ, ಪತ್ರಕರ್ತರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವಿಷ್ಣು ನಾಯ್ಕ (81) ಶನಿವಾರ ತಡರಾತ್ರಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಅಂಕೋಲಾದ ಅಂಬಾರಕೊಡ್ಲದವರಾಗಿರುವ ವಿಷ್ಣು ನಾಯ್ಕ ಅವರು 1944ರಲ್ಲಿ ತಾಲ್ಲೂಕಿನ ಅಂಬಾರಕೊಡ್ಲಾದಲ್ಲಿ ಜನಿಸಿದರು. ಎಂ.ಎ ಪದವೀಧರರಾಗಿದ್ದು, ದಿನಕರ ದೇಸಾಯಿ ಅವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಕುಮಟಾ: ಖ್ಯಾತ ತೆರಿಗೆ ಸಲಹೆಗಾರ, ಸಹೃದಯಿ ಸಂಘಟಕ ಎಂ.ಕೆ.ಹೆಗಡೆ ನಿಧನ

ಕುಮಟಾ: ಖ್ಯಾತ ತೆರಿಗೆ ಸಲಹೆಗಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಎಂ.ಕೆ.ಹೆಗಡೆ ಅವರು ಗುರುವಾರ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವಕೀಲರು ಹಾಗೂ ತೆರಿಗೆ ಸಲಹೆಗಾರರಾಗಿದ್ದ ಅವರು ಸಹೃದಯಿ ಹಾಗೂ ದಾನಿ ಎಂದೇ ಚಿರಪರಿಚಿತರಾಗಿದ್ದರು. ಎಂ.ಕೆ.ಹೆಗಡೆ ಅವರು ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. … Continued

ಧಾರವಾಡ: ಖ್ಯಾತ ಹಿಂದೂಸ್ತಾನೀ ಗಾಯಕಿ ಡಾ. ಸುಲಭಾ ದತ್ತ ನೀರಲಗಿ ಇನ್ನಿಲ್ಲ

ಧಾರವಾಡ : ದಿ.ಗಂಗೂಬಾಯಿ ಹಾನಗಲ್ ಅವರ ಹಿರಿಯ ಶಿಷ್ಯೆ ಹಾಗೂ ಧಾರವಾಡದ ಪ್ರಸಿದ್ಧ ಹಿಂದೂಸ್ತಾನೀ ಸಂಗೀತಗಾರರಾದ ಡಾ. ಸುಲಭಾ ದತ್ತ ನೀರಲಗಿ (೬೮) ಅವರು ಶನಿವಾರ (ನವೆಂಬರ್‌ ೧೮) ನಿಧನರಾಗಿದ್ದಾರೆ. ಧಾರವಾಡದ ರಜತಗಿರಿ ನಿವಾಸಿಯಾಗಿದ್ದ ಡಾ. ಸುಲಭಾ ದತ್ತ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು, ಪತಿ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗ … Continued