ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ : ಎಂಟು ದಶಕಗಳ ಹಾಡಿನ ಪಯಣ ಅಂತ್ಯ

ನವದೆಹಲಿ: ಭಾರತೀಯ ಚಿತ್ರರಂಗದ ದಂತಕಥೆ, ಬಹುಮುಖ ಪ್ರತಿಭೆಯ ಗಾಯಕಿ ಆಶಾ ಭೋಂಸ್ಲೆ (92) ಅವರು ಅಂಗಾಂಗ ವೈಫಲ್ಯದಿಂದಾಗಿ ಭಾನುವಾರ (ಏಪ್ರಿಲ್ 12) ನಿಧನರಾದರು. ಈ ವಿಷಯವನ್ನು ಅವರ ಕುಟುಂಬ ಸದಸ್ಯರು ಮತ್ತು ವೈದ್ಯರು ಖಚಿತಪಡಿಸಿದ್ದಾರೆ. ಆಶಾ ಅವರ ಪುತ್ರ ಆನಂದ ಭೋಂಸ್ಲೆ ಈ ಬಗ್ಗೆ ಮಾಹಿತಿ ನೀಡಿದ್ದು, “ನನ್ನ ತಾಯಿ ಇಂದು ನಮ್ಮನ್ನು ಅಗಲಿದ್ದಾರೆ. ಸಾರ್ವಜನಿಕರು … Continued

ಖ್ಯಾತ ಉದ್ಯಮಿ, ರೇಮಂಡ್ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ನಿಧನ

ಮುಂಬೈ: ಭಾರತದ ಖ್ಯಾತ ಉದ್ಯಮಿ, ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಅವರು ಶನಿವಾರ ಸಂಜೆ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಉದ್ಯಮ, ವಿಮಾನಯಾನ ಮತ್ತು ಜವಳಿ ಉದ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ದಾರ್ಶನಿಕ ಉದ್ಯಮಿ ಮತ್ತು ಲೋಕೋಪಕಾರಿ ಎಂದು ಗುರುತಿಸಿಕೊಂಡಿದ್ದರು. ಅವರ ಪುತ್ರ ಹಾಗೂ … Continued

ಯಕ್ಷಗಾನದ ಮೇರು ಕಲಾವಿದ ಗೋವಿಂದ ಭಟ್‌ ಇನ್ನಿಲ್ಲ

ಮಂಗಳೂರು :  ತೆಂಕುತಿಟ್ಟು ಶೈಲಿಯ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ. ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೆದ್ದೂರಿನ ತಮ್ಮ  ಪುತ್ರನ‌ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು … Continued

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕ ಸದಸ್ಯ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಂಬಿಕಸ್ತ ಒಡನಾಡಿ ಹಾಗೂ ಪಕ್ಷದ ಪ್ರಧಾನ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಮುಕುಲ್‌ ರಾಯ್, … Continued

ಫುಟ್ಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಶಿಲ್ಲಾಂಗ್ ಸಂಸದ ರಿಕಿ ಸಿಂಗ್ಕೋನ್ ನಿಧನ

ಶಿಲ್ಲಾಂಗ್: ಮೇಘಾಲಯದ ‘ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ’ (VPP) ನಾಯಕ ಹಾಗೂ ಶಿಲ್ಲಾಂಗ್ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ರಿಕಿ ಎಜೆ ಸಿಂಗ್ಕೋನ್ (Ricky AJ Syngkon) ಅವರು ಗುರುವಾರ ಸಂಜೆ ಫುಟ್ಬಾಲ್ ಆಡುತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದು ನಿಧನರಾಗಿದ್ದಾರೆ ಈ ಅನಿರೀಕ್ಷಿತ ಘಟನೆಯು ಇಡೀ ರಾಜ್ಯದಾದ್ಯಂತ ತೀವ್ರ ಆಘಾತವನ್ನುಂಟುಮಾಡಿದೆ. ವರದಿಗಳ ಪ್ರಕಾರ, ಸಿಂಗ್ಕೋನ್ … Continued

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್‌ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಜೋ ಸೈಮನ್‌ ಅಪಾರ ಕೊಡುಗೆ … Continued

ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued

ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನ

ಬೀದರ: ಕಲ್ಯಾಣ ಕರ್ನಾಟಕದ ಹಿರಿಯ ನಾಯಕ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.  ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ರಾತ್ರಿ … Continued

ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ರಾಜಕೀಯ ಇತಿಹಾಸದ ಪ್ರಬಲ ನಾಯಕಿ, ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು, ಮಂಗಳವಾರ (ಡಿಸೆಂಬರ್‌ 30) ಮುಂಜಾನೆ 6 ಗಂಟೆಗೆ  ಕೊನೆಯುಸಿರೆಳೆದರು ಎಂದು ಬಿಎನ್‌ಪಿ … Continued

ಹಿರಿಯ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದಕುಮಾರ ಶುಕ್ಲಾ ನಿಧನ

ನವದೆಹಲಿ: ಹಿಂದಿ ಸಾಹಿತ್ಯ ಲೋಕದ ದಿಗ್ಗಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದಕುಮಾರ ಶುಕ್ಲಾ (89) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಸಂಜೆ ರಾಯ್ಪುರದಲ್ಲಿ ನಿಧನರಾದರು. ಛತ್ತೀಸ್‌ಗಢ ಮೂಲದವರಾದ ಶುಕ್ಲಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಡಿಸೆಂಬರ್ 2 ರಂದು ಅವರನ್ನು ರಾಯ್‌ಪುರದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 4:48ಕ್ಕೆ … Continued