ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಶಿವೈಕ್ಯ

ಕಲಬುರಗಿ: ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಶ್ರೀ ಡಾ. ಶರಣಬಸವಪ್ಪ ಅಪ್ಪ (Dr.Sharanabasappa Appa) ಗುರುವಾರ (ಆಗಸ್ಟ್‌ 14) ಶಿವೈಕ್ಯರಾದರು. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು … Continued

ಜಾರ್ಖಂಡದ ಮಾಜಿ ಸಿಎಂ ಶಿಬು ಸೊರೇನ್ ನಿಧನ

ರಾಂಚಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಸಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಮಾಹಿತಿ ನೀಡಿದ್ದಾರೆ. 81 ವರ್ಷದ ಸಿಬು ಸೊರೇನ್ ನಿಧನವು ಬುಡಕಟ್ಟು ಚಳುವಳಿ ರಾಷ್ಟ್ರೀಯ ಪ್ರಾಮುಖ್ಯತೆಗೆ ಏರಿದ ರಾಜಕೀಯ ಯುಗದ ಅಂತ್ಯವನ್ನು ಸೂಚಿಸುತ್ತದೆ. ಶಿಬು ಸೊರೇನ್‌ ಮೂತ್ರಪಿಂಡ ಸಂಬಂಧಿತ … Continued

ಕೇರಳದ ಮಾಜಿ ಮುಖ್ಯಮಂತ್ರಿ, ಕಮ್ಯುನಿಸ್ಟ್ ಚಳವಳಿಯ ಐಕಾನ್ 101 ವರ್ಷದ ವಿ.ಎಸ್. ಅಚ್ಯುತಾನಂದನ್ ನಿಧನ

ತಿರುವನಂತಪುರಂ: ಶತಾಯುಷಿ, ಕೇರಳ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ ಹಿರಿಯ ವಿ.ಎಸ್. ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು. 101 ವರ್ಷ ವಯಸ್ಸಿನ ಅವರನ್ನು ಜೂನ್ 23 ರಂದು ಮನೆಯಲ್ಲಿ ಹೃದಯಾಘಾತ ಸಂಭವಿಸಿದ ನಂತರ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಮಂಗಳವಾರ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ … Continued

ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ- ಮರಾಠಿ ಪತ್ರಿಕೆ ಕೇಸರಿ ಸಂಪಾದಕ ದೀಪಕ ತಿಲಕ್ ನಿಧನ

ಪುಣೆ : ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಮರಿಮೊಮ್ಮಗ ಮತ್ತು ಮರಾಠಿ ಪತ್ರಿಕೆ ಕೇಸರಿ ಟ್ರಸ್ಟಿ ಸಂಪಾದಕ ದೀಪಕ ತಿಲಕ್ ಅವರು ಬುಧವಾರ ಮುಂಜಾನೆ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕಾಯಿಲೆಗಳಿಂದ ನಿಧನರಾದರು ಎಂದು ಅವರು ಹೇಳಿದರು. ತಿಲಕ್ ಅವರಿಗೆ ಒಬ್ಬ … Continued

ಮುಂಬೈ | ಬಾಲಿವುಡ್‌ ನಟ-ನಿರ್ಮಾಪಕ ಧೀರಜಕುಮಾರ ನಿಧನ

ಮುಂಬೈ :  ಓಂ ನಮಃ ಶಿವಾಯ ಮತ್ತು ಅದಾಲತ್ ಎಂಬ ಜನಪ್ರಿಯ ದೂರದರ್ಶನ ಕಾರ್ಯಕ್ರಮಗಳನ್ನು ನಿರ್ಮಿಸಿದ ಹಿರಿಯ ನಟ-ನಿರ್ಮಾಪಕ ಧೀರಜಕುಮಾರ ಮಂಗಳವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಧೀರಜಕುಮಾರ ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ … Continued

ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಹೆಸರು ಪಡೆದಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದ ಇವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ … Continued

750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

ಹೈದರಾಬಾದ್‌ : ಟಾಲಿವುಡ್‌ ಚಿತ್ರರಂಗದ ಖ್ಯಾತ ನಟ ಕೋಟಾ ಶ್ರೀನಿವಾಸ ರಾವ್ (kota srinivasa rao) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟಾ ಶ್ರೀನಿವಾಸ ರಾವ್ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕೋಟ ಶ್ರೀನಿವಾಸ ರಾವ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. … Continued

42ನೇ ವಯಸ್ಸಿನಲ್ಲೇ ʼಕಾಂಟಾ ಲಗಾʼ ಖ್ಯಾತಿಯ ಶೆಫಾಲಿ ಜರಿವಾಲಾ ಸಾವು

ಮುಂಬೈ: ‘ಕಾಂಟಾ ಲಗಾ’ ಹಾಡಿನ ಖ್ಯಾತಿಯ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರನ್ನು ಅವರ ಪತಿ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿಗೆ ಕಾರಣವನ್ನು ಅವರ ಕುಟುಂಬ ಸದಸ್ಯರು ಇನ್ನೂ ಬಹಿರಂಗಪಡಿಸಿಲ್ಲ. ಏತನ್ಮಧ್ಯೆ, ಮುಂಬೈ ಪೊಲೀಸರು ತನಿಖೆಗಾಗಿ ತಡರಾತ್ರಿ … Continued

ಕನ್ನಡದ ಖ್ಯಾತ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್‌ಎಸ್‌ವಿ ಎಂದೇ ಕರೆಯಲ್ಪಡುತ್ತಿದ್ದ … Continued

ಕನ್ನಡದ ಖ್ಯಾತ ಕಿರುತೆರೆ ನಟ ಶ್ರೀಧರ ನಾಯಕ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ (Kannada Serial) ಖ್ಯಾತ ನಟ ಶ್ರೀಧರ್ ನಾಯಕ (47) ಮೇ 26ರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ. ‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ತೀವ್ರ … Continued