ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ … Continued

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು 85 ನೇ ವಯಸ್ಸಿನಲ್ಲಿ ಲಕ್ನೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ನ್ಯೂರಾಲಜಿ ವಾರ್ಡ್ ಎಚ್‌ಡಿಯುಗೆ ಸ್ಥಳಾಂತರಿಸಲಾಯಿತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ … Continued

ಕುಮಟಾ : ಖ್ಯಾತ ವೈದ್ಯ ಡಾ.ಅನಿಲ ಹೆಗಡೆ ನಿಧನ ; ಕಣ್ಣುಗಳ ದಾನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯವರಾಗಿದ್ದ ಖ್ಯಾತ ವೈದ್ಯ ಡಾ.ಅನಿಲ ಹೆಗಡೆ (76) ಶನಿವಾರ ನಿಧನರಾಗಿದ್ದಾರೆ. ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಅವರು ಪತ್ನಿ, ಭವಾನಿ, ಪುತ್ರರಾದ ಇಂಜಿಯರ್ ಆದ ವಿಜಯ  ಹಾಗೂ  ವೈದ್ಯರಾದ ಡಾ.ವಿಕ್ರಮ  ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅತ್ಯಂತ ಪ್ರತಿಭಾನ್ವಿತರಾಗಿದ್ದ ಡಾ. ಅನಿಲ ಹೆಗಡೆಯವರು … Continued

ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಕುಮಟಾ | ಖ್ಯಾತ ವಿದ್ವಾಂಸ, ಡಾ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಹಂಪಿಹೊಳಿ ನಿಧನ

ಕುಮಟಾ : ಖ್ಯಾತ ಸಂಸ್ಕೃತ ವಿದ್ವಾಂಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ವಿ. ಕೆ. ಹಂಪಿಹೊಳಿ (71) ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ತಾಲೂಕಿನ ಹಂಪಿಹೊಳಿಯವರಾದ ಅವರು ಕುಮಟಾದ ಕೆನರಾ ಸಂಸ್ಥೆಯ ಡಾ. ಎ.ವಿ.ಬಾಳಿಗಾ … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ನಿಧನ

ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ … Continued

ಖ್ಯಾತ ಪರಮಾಣು ವಿಜ್ಞಾನಿ, ಭಾರತದ ಪೋಖ್ರಾನ್ ಪರಮಾಣು ಶಕ್ತಿ ಪರೀಕ್ಷೆ ರೂವಾರಿ ಆರ್‌.ಚಿದಂಬರಂ ನಿಧನ

ನವದೆಹಲಿ : 1975 ಮತ್ತು 1998ರ ಪರಮಾಣು ಶಕ್ತಿ ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ಅರ್‌. ಚಿದಂಬರಂ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3:20 ಕ್ಕೆ ಕೊನೆಯುಸಿರೆಳೆದರು ಎಂದು ಅಣುಶಕ್ತಿ ಇಲಾಖೆಯ … Continued