ಮೀಡಿಯಾ ಬ್ಯಾರನ್- ರಾಮೋಜಿ ರಾವ್ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಹೈದರಾಬಾದ್‌ : ತೆಲುಗು ಮೀಡಿಯಾ ಬ್ಯಾರನ್ ಮತ್ತು ಹೈದರಾಬಾದ್‌ನ ಫಿಲ್ಮ್ ಸಿಟಿಯ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ರಾಮೋಜಿ ರಾವ್ ಅವರ ಸುಪ್ರಸಿದ್ಧ ಪ್ರಯಾಣವು ಜೂನ್ 8, 2024 ರಂದು ಕೊನೆಗೊಂಡಿತು, ಅವರು ಹೃದಯ ಸಂಬಂಧಿ ತೊಡಕುಗಳಿಂದ ನಿಧನರಾದರು. ಭಾರತೀಯ ಮಾಧ್ಯಮ ಮತ್ತು ಮನರಂಜನೆ ಕ್ಷೇತ್ರದಲ್ಲಿ … Continued

‘ಐಸ್‌ಕ್ರೀಂ ಮ್ಯಾನ್‌’ ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

ಮುಂಬೈ: ಭಾರತದ ಟಾಪ್ ಐಸ್ ಕ್ರೀಮ್ ಬ್ರ್ಯಾಂಡ್‌ಗಳಲ್ಲಿ ಒಂದಾದ ನ್ಯಾಚುರಲ್ಸ್ ಐಸ್ ಕ್ರೀಮ್ ಸಂಸ್ಥಾಪಕ ರಘುನಂದನ ಶ್ರೀನಿವಾಸ ಕಾಮತ್ (70) ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮುಂಬೈನ ಎಚ್.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ನಿಧನರಾದರು. ಎಂದು ಹೇಳುತ್ತವೆ. ರಘುನಂದನ ಕಾಮತ್ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸಾಧಾರಣ ಹಿನ್ನೆಲೆಯಿಂದ ಬಂದ ಅವರು, 400 ಕೋಟಿ … Continued

ಬಿಜೆಪಿ ಹಿರಿಯ ನಾಯಕ- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾದರು. 72 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಒಂದು ಕಾಲದಲ್ಲಿ ಬಿಹಾರದಲ್ಲಿ ಬಿಜೆಪಿಯ ಚಿರಪರಿಚಿತ ಮುಖವಾಗಿದ್ದ ಧೀಮಂತ … Continued

ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued

ವಿಶ್ವದ ಅತ್ಯಂತ ಹಿರಿಯ ಸಂಯೋಜಿತ ಅವಳಿಗಳು 62ನೇ ವಯಸ್ಸಿನಲ್ಲಿ ನಿಧನ

ಪ್ರಪಂಚದ ಅತ್ಯಂತ ಹಿರಿಯ ಸಂಯೋಜಿತ ಅವಳಿಗಳು ತಮ್ಮ 62ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಲೋರಿ ಮತ್ತು ಜಾರ್ಜ್ ಶಾಪೆಲ್ ಏಪ್ರಿಲ್ 7 ರಂದು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಲೈಬೆನ್ಸ್‌ಪರ್ಗರ್ ಫ್ಯೂನರಲ್ ಹೋಮ್ಸ್ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ಸಂತಾಪ ಸೂಚಿಸಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಹ ಪ್ರಕಟಣೆಯಲ್ಲಿ ಅವರ ಮರಣವನ್ನು ದೃಢಪಡಿಸಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ … Continued

ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ವಿಧಿವಶ

ಬೆಂಗಳೂರು: ನಾಡಿನ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ (67) ಅವರು ಶುಕ್ರವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್ ಕೆ ಜೈನ್ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಕುಮಟಾ: ಮಿರ್ಜಾನ-ಕೋಡ್ಕಣಿಯ ವೈದ್ಯ ಡಾ. ರತ್ನಾಕರ ಶಾನಭಾಗ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ-ಕೋಡ್ಕಣಿಯ ಹೆಸರಾಂತ ವೈದ್ಯರಾಗಿದ್ದ ಡಾ. ರತ್ನಾಕರ ರಾಮ ಶಾನಭಾಗ (77) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ವಾರ ಮಿರ್ಜಾನ ಬಳಿ ನಡೆದ ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಪಾರ … Continued