ಅಡಕೆ ಸಾಗಣೆಗೆ ಯಾವುದೇ ತೊಂದರೆಯಾಗದು : ಮಹಾರಾಷ್ಟ್ರ ಸಿಎಂ ಫಡ್ನವೀಸ್‌ ಭರವಸೆ

ನವದೆಹಲಿ ​: ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಅಡಕೆ ಸಾಗಣೆ ಸಮಸ್ಯೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜೊತೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ರಾಜ್ಯದ … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ :ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ; ಬಿಜೆಪಿ ಅತಿದೊಡ್ಡ ಪಕ್ಷ

 ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದೆ. ಒಟ್ಟು 227 ಸದಸ್ಯ ಬಲದ ಪಾಲಿಕೆಯಲ್ಲಿ ಮಹಾಯುತಿ 120 ಸ್ಥಾನಗಳಲ್ಲಿ ಮುಂದಿದ್ದು,  ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹಾಯುತಿ ಮೈತ್ರಿಕೂಟ 120 ಸ್ಥಾನಗಳಲ್ಲಿ ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 93 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷ ಶಿವಸೇನೆ 27 ಸ್ಥಾನಗಳಲ್ಲಿ … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಬಿಜೆಪಿ ಅತಿದೊಡ್ಡ ಪಕ್ಷ, ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರದ ಒಟ್ಟು 246 ನಗರ ಪಾಲಿಕೆಗಳು ಹಾಗೂ 42 ನಗರ ಪಂಚಾಯತಗಳಿಗೆ ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.  246 ನಗರ ಪಾಲಿಕೆಗಳಲ್ಲಿ ಮಹಾಯುತಿ ಮೈತ್ರಿಕೂಟವು  207 ನಗರ ಪಾಲಿಕೆಗಳಲ್ಲಿ ಅಧ್ಯಕ್ಷ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.  ಮಹಾ ವಿಕಾಸ ಅಘಾಡಿಯನ್ನು ಒಟ್ಟು 44 ಕ್ಕೆ ಸೀಮಿತಗೊಳಿಸಿದೆ. ರಾಜ್ಯ ಚುನಾವಣಾ ಆಯೋಗದ  ಪ್ರಕಾರ, … Continued

ಸರಪಂಚ ಹತ್ಯೆ ಪ್ರಕರಣ ; ಆಪ್ತ ಸಹಾಯಕನ ಬಂಧನದ ನಂತರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಬೀಡ್‌ನ ಸರಪಂಚ ಸಂತೋಷ ದೇಶಮುಖ್‌ ಅವರ ಹತ್ಯೆ ಪ್ರಕರಣದಲ್ಲಿ ಎನ್‌ಸಿಪಿ ನಾಯಕ ಹಾಗೂ ಸಚಿವ ಧನಂಜಯ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ ಕರಾಡ್‌ ನನ್ನು ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮಂಗಳವಾರ ಹೇಳಿದ್ದಾರೆ. ಫಡ್ನವೀಸ್ … Continued

ಸಿಗದ ಸಚಿವ ಸ್ಥಾನ ; ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಶಿವಸೇನೆ ಶಾಸಕ

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವಸೇನೆಯ ಏಕನಾಥ ಶಿಂಧೆ ಬಣದ ಶಾಸಕರೊಬ್ಬರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಉಪನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು, ಅಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಮಹಾಯುತಿ 62 ಸ್ಥಾನಗಳಲ್ಲಿ 47 ಸ್ಥಾನಗಳನ್ನು … Continued

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿಯ 19, ಶಿವಸೇನೆಯ 11, ಎನ್‌ಸಿಪಿಯ 9 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಂಬೈ : ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಭಾನುವಾರ ನಡೆದಿದ್ದು, ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್) 39 ಸಚಿವರು ಭಾನುವಾರ ನಾಗ್ಪುರದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯ 19, ಶಿಂಧೆ ಸೇನೆಯ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ … Continued

ಮಹಾರಾಷ್ಟ್ರ ವಿಧಾನಸಭೆ ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ವಿಪಕ್ಷಗಳ ಶಾಸಕರು….

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನೂತನ ಚುನಾಯಿತ ಶಾಸಕರು ಇಂದು, ಶನಿವಾರ(ಡಿಸೆಂಬರ್‌ 7) ನಡೆದ ಮಹಾರಾಷ್ಟ್ರ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಾಕ್‌ಔಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ದುರ್ಬಳಕೆಯಿಂದ ಆಡಳಿತಾರೂಢ ಮಹಾಯುತಿ ಒಕ್ಕೂಟದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದಾರೆ. ಆದಾಗ್ಯೂ, ವಿಪಕ್ಷಗಳ … Continued

ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued

ಮಹಾರಾಷ್ಟ್ರ | ಗುರುವಾರ ದೇವೇಂದ್ರ ಫಡ್ನವೀಸ್‌, ಇಬ್ಬರು ಡಿಸಿಎಂಗಳ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದ (Maharashtra) ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಶಿವಸೇನೆ ನಾಯಕ ಏಕನಾಥ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿಜೆಪಿ, ಶಿವಸೇನೆ ಶಿಂಧೆ ಬಣ ಮತ್ತು ಎನ್‌ಸಿಪಿ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued