ವೀಡಿಯೊ…| ಧರ್ಮಸ್ಥಳ ಪ್ರಕರಣ | ತನಿಖೆ ಆರಂಭಿಕ ಹಂತದಲ್ಲೇ ಎಡವಿದೆ ; ತಮ್ಮದೇ ಸರ್ಕಾರ ಟೀಕಿಸಿದ ಕಾಂಗ್ರೆಸ್‌ ಶಾಸಕ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ… ಧರ್ಮಸ್ಥಳ ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿರುವುದಾಗಿ ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ … Continued

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued

ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು … Continued

ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿ.ಎಲ್. ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ಉಡುಪಿ … Continued

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮಾಸ್ಕ್‌ ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಆಗುತ್ತಿದೆ. ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ಎಂದು ಹೇಳಿಕೊಂಡಿರುವ ವ್ಯಕ್ತಿ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಮತ್ತೊಂದು ಟ್ವಿಸ್ಟ್‌ ನೀಡಿದೆ. ಮಾಸ್ಕ್ ಮ್ಯಾನ್ ಹೇಳಿದಂತೆ … Continued

ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್‌ ಐಟಿಗೆ ಹಸ್ತಾಂತರ

ಮಂಗಳೂರು : 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಆವರಣದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಅನನ್ಯ ತಾಯಿ ಎನ್ನಲಾಗಿರುವ  2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣವನ್ನು ಕೇಸ್ ನಂ. 175/PTN/DPS/2025 ಅಡಿಯಲ್ಲಿ … Continued

ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ : ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಶವ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೂರುದಾರನ ಮನವಿಯಂತೆ ಧರ್ಮಸ್ಥಳದ 13 ಸ್ಥಳಗಳಲ್ಲಿ ಗುಂಡಿ ತಗೆದು ಶೋಧ ನಡೆಸಲಾಗಿದೆ. ಅವುಗಳಲ್ಲಿ ಎರಡು ಕಡೆ ಮಾನವನ ಮೂಳೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued

ಧರ್ಮಸ್ಥಳ | ಶವಗಳ ಹೂತಿಟ್ಟ ಪ್ರಕರಣ : 13 ಜಾಗ ತೋರಿಸಿದ ದೂರುದಾರ

ಮಂಗಳೂರು : ಧರ್ಮಸ್ಥಳ ಪೊಲೀಸ್‌ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಮೃತದೇಹಗಳನ್ನುಹೂತುಹಾಕಿದ ಸಾಕ್ಷಿ ದೂರುದಾರ ವ್ಯಕ್ತಿಯು 13 ಸ್ಥಳಗಳನ್ನು ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳಿಗೆ ತೋರಿಸಿದ್ದಾರೆ. ವಿಶೇಷ ತನಿಖಾ ತಂಡ (SIT) ಮಂಗಳೂರಿನಲ್ಲಿ ಎರಡು ದಿನಗಳ ವಿಚಾರಣೆಯ ನಂತರ ಈ ಬೆಳವಣಿಗೆ ನಡೆದಿದೆ. ಮಾಹಿತಿ ಬಹಿರಂಗಪಡಿಸುವ ವ್ಯಕ್ತಿ, 1998 … Continued

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯೂ ಟ್ಯೂಬ್ ಚಾನೆಲ್‌

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರಕುಮಾರ ಅವರ ವಿರುದ್ಧ ಯಾವುದೇ ಅವಹೇಳನಕಾರಿ ವಿಷಯ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿದ್ದ ಬೆಂಗಳೂರು ನಗರ ಸಿವಿಲ್ ಮತ್ತು … Continued