ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಲು ಸರ್ಕಾರದ ಅನುಮತಿ … Continued

ಮಗಳು ಮೃತಪಟ್ಟರೂ ಆಕೆಯ ಕಾನೂನಾತ್ಮಕ ಉತ್ತರಾಧಿಕಾರಿಗಳಿಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ : ಹೈಕೋರ್ಟ್

ಬೆಂಗಳೂರು : ಹಿಂದೂ ಉತ್ತರಾಧಿಕಾರ ಕಾಯಿದೆಗೆ ತಿದ್ದುಪಡಿ ಮಾಡುವ ಮುನ್ನ ಮಗಳು ಮೃತಪಟ್ಟಿದ್ದಾರೆಂಬ ಕಾರಣಕ್ಕೆ ಮಗಳ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ನಿರಾಕರಿಸಲು ಸಾಧ್ಯವಿಲ್ಲ. ಪುತ್ರಿ ಮೃತಪಟ್ಟಿದ್ದರೂ ಆಕೆಯ ಕಾನೂನಾತ್ಮಕ ವಾರಸುದಾರರಿಗೆ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಇತ್ತೀಚಿಗೆ ತೀರ್ಪು ನೀಡಿದೆ. ”ಹೆಣ್ಣು ಮಕ್ಕಳಿಗೆ ಜಂಟಿ ಉತ್ತರಾಧಿಕಾರದ (ಕೊಪಾರ್ಸೆನರಿ) … Continued