ಧಾರವಾಡ : ರೈಲಿನ ಬೋಗಿಯಲ್ಲಿ ಸೀಟ್ ಕೆಳಗಡೆ ಮಹಿಳೆಯ ಶವ ಪತ್ತೆ

ಧಾರವಾಡ: ಮಹಾರಾಷ್ಟ್ರದ ಸೊಲ್ಲಾಪುರದಿಂದ ಧಾರವಾಡಕ್ಕೆ ಭಾನುವಾರ ಬಂದ ರೈಲಿನ ಮಹಿಳಾ ಬೋಗಿಯ ಆಸನದ ಕೆಳಗೆ ಅಡಗಿಸಿಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ರೈಲ್ವೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆಯ ವಯಸ್ಸು ಸುಮಾರು 30ರಿಂದ 35 ವರ್ಷಗಳ ನಡುವೆ ಇರಬಹುದೆಂದು ಅಂದಾಜಿಸಲಾಗಿದೆ. ರೈಲು ಬೆಳಿಗ್ಗೆ ಸುಮಾರು 9:30ಕ್ಕೆ ಧಾರವಾಡ … Continued

ಅಳ್ನಾವರ : ಶಾಲಾ ವಾಹನ ಗುದ್ದಿ 2 ವರ್ಷದ ಮಗು ಸಾವು

ಧಾರವಾಡ : ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದಿದ್ದ ವಾಹನ ಡಿಕ್ಕಿ ಹೊಡೆದು ಸುಮಾರು ಎರಡು ವರ್ಷದ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ ಎಂದುವರದಿಯಾಗಿದೆ. ಮೃತ ಮಗುವನ್ನು ಹುಲ್ಲಿಕೇರಿ ಗ್ರಾಮದ ಲುಕ್ಮಾನ್ ಬೋಗೂರ (2) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಶಾಲಾ ವಾಹನ ಹುಲಿಕೇರಿ … Continued

ಧಾರವಾಡ : ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಹತ್ಯೆ: 8 ವರ್ಷದ ಮಗನಿಗೆ ಗಾಯ ; ಪತ್ನಿ ವಶಕ್ಕೆ

ಧಾರವಾಡ: ನಗರದಲ್ಲಿ ವೈದ್ಯರೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಎಂಟು ವರ್ಷದ ಮಗ ಚಾಕು ಇರಿತದಿಂದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ವೈದ್ಯರನ್ನು ಡಾ. ಕಿರಣ ಹೊನ್ನಣ್ಣವರ (45) ಎಂದು ಗುರುತಿಸಲಾಗಿದೆ. ಅವರು ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ … Continued

ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತು

ಧಾರವಾಡ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಿ ಕವಿವಿ ಕುಲಸಚಿವರು ಬುಧವಾರ ಆದೇಶ ಹೊರಡಿಸಿದ್ದಾರೆ. ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವುದು, ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡುತ್ತಿರುವ ಬಗ್ಗೆ ಕುಲಪತಿಗಳಿಗೆ ದೂರು ಸಲ್ಲಿಕೆಯಾಗಿದ್ದವು. ಕಿರುಕುಳ ನೀಡಿದಕ್ಕೆ ವಿದ್ಯಾರ್ಥಿನಿ … Continued

ಧಾರವಾಡ; ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) … Continued

ಮನೆ ಕಟ್ಟಲು ತೋಡಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರ ಸಾವು

ಧಾರವಾಡ: ಇಬ್ಬರು ಬಾಲಕರು ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಕುಮಾರ ನಿಂಗಪ್ಪ ಮುದಕಣ್ಣವರ (7) ಮತ್ತು ಪ್ರಥಮ ಸುರೇಶ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ ಉಳ್ಳಾಗಡ್ಡಿ ಎಂಬಾತ ಧಾರವಾಡದ ಸತ್ತೂರಿನವನು. ರಜೆ ಇದ್ದಿದ್ದರಿಂದ ಮನಸೂರಿಗೆ ಬಂದಿದ್ದ ಎನ್ನಲಾಗಿದೆ. ಇವರಿಬ್ಬರು ಬುಧವಾರ … Continued

ಅಕ್ಷರ ಲೋಕದ ಅಪರೂಪದ ಶಿಲ್ಪಿ: ಪ್ರೊ. ಎಂ.ಆರ್. ಕುಂಬಾರ ಶತಮಾನದ ಸ್ಮರಣೆ

(೧೬-೦೪-೨೦೨೬ ರಂದು ಕರ್ನಾಟಕ ವಿಶ್ವವಿದ್ಯಾಲಯದ ಗೊಲ್ಡನ್ ಜುಬಲಿ ಹಾಲ್‌ನಲ್ಲಿ ಪ್ರೊ. ಎಂ.ಆರ್. ಕುಂಬಾರ ಅವರ ಜನ್ಮ ಶತಮಾನೋತ್ಸವ ಸವಿನೆನಪಿಗಾಗಿ ೨ ದಿನಗಳ ರಾಷ್ಟ್ರಮಟ್ಟದ ಸಮ್ಮೇಳನ ನಡೆಯುತ್ತಿದ್ದು, ಆ ನಿಮಿತ್ತ ಲೇಖನ) ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಎಂದಾಕ್ಷಣ ತಟ್ಟನೆ ಸ್ಮರಣೆಗೆ ಬರುವವರೆಂದರೆ ಪ್ರೊ. ಎಂ.ಆರ್. ಕುಂಬಾರ, ಪ್ರೊ.ಕೆ.ಎಸ್. ದೇಶಪಾಂಡೆ ಮತ್ತು ಡಾ.ಎಸ್.ಆರ್. … Continued

ಧಾರವಾಡ : : ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಧಾರವಾಡ : ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ (youth congress) ಮುಖಂಡ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ಶುಕ್ರವಾರ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ … Continued

ಅಮೃತ ಮಹೋತ್ಸವ ಸಂಭ್ರಮದಲ್ಲಿ ಶಿಕ್ಷಣ ಪ್ರೇಮಿ ಡಾ. ಅಜಿತಪ್ರಸಾದ

(ಇಂದು (೦೫-೦೪-೨೦೨೬) ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ೦೯: ೩೦ಕ್ಕೆ ಡಾ. ಅಜಿತಪ್ರಸಾದ ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಧಾರವಾಡದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜನತಾ ಶಿಕ್ಷಣ ಸಮಿತಿ(ಜೆಎಸ್‌ಎಸ್‌)ಯು ಇಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮನ್ನಣೆ ಗಳಿಸುವಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ … Continued

ಧಾರವಾಡ : ಮಾಜಿ ಶಾಸಕನ ಪುತ್ರನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (Raju Bolashetty) ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ರಾಮಾಪುರ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ. … Continued