ಧಾರವಾಡ: ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಹಾವಿನ ತಲೆಯಲ್ಲಿದ್ದ ಕ್ಯಾನ್ಸರ್‌ ತರಹದ ಗಡ್ಡೆ ಹೊರತೆಗೆದ ವೈದ್ಯರು..!

ಧಾರವಾಡ : ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಅದರಲ್ಲಿದ್ದ ಕ್ಯಾನ್ಸರ್ ಕಾರಕ ಗಡ್ಡೆಯನ್ನು ಹೊರತೆಗೆದ ಅಪರೂಪದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಾಣಿ ವೈದ್ಯ ಡಾ. ಅನಿಲಕುಮಾರ ಪಾಟೀಲ ಅವರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮನೆಯೊಂದರಲ್ಲಿ ಹಾವು ಸೇರಿಕೊಂಡಿರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಉರಗ ರಕ್ಷಕ ಸೋಮಶೇಖರ ಅವರು ಆ ಮನೆಗೆ ಹೋಗಿ ನೋಡಿದಾಗ ಅದು ಟ್ರಿಂಕೆಟ್ … Continued

ಮತದಾರರ ಪಟ್ಟಿ ಪರಿಷ್ಕರಣೆ, ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಧಾರವಾಡ: ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ -74 ರ ವ್ಯಾಪ್ತಿಯ ಧಾರವಾಡದ ಮತಗಟ್ಟೆ ಸಂಖ್ಯೆ 105 ರ ಮತಗಟ್ಟೆ ಮಟ್ಟದ ಅಧಿಕಾರಿ ಸಚಿನ್ ನಾಯ್ಕ ಅವರನ್ನು ಅಮಾನತು ಮಾಡಲಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಸೇವೆಯಿಂದ ಅಮಾನತು ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ … Continued

ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು … Continued

ಜೀವ ಬೆದರಿಕೆ : ದೂರು ದಾಖಲಿಸಿದ ಪ್ರಮೋದ ಮುತಾಲಿಕ

ಧಾರವಾಡ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಅಪರಿಚತ ವ್ಯಕ್ತಯಿಂದ ಜೀವ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಬಂದ ವಾಯ್ಸ್ ಮೆಸೇಸ್‌ನಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮುತಾಲಿಕ್‌ ಅವರು ಆ ವ್ಯಕ್ತಿಯ ಮೇಲೆ … Continued

ಮಹಿಳೆಯರಿಗಾಗಿ ಧಾರವಾಡ ಜೆಎಸ್ಎಸ್‌ನಲ್ಲಿ ಉದ್ಯೋಗ ಮೇಳ

ಧಾರವಾಡ: ಇಲ್ಲಿನ ಜೆ.ಎಸ್.ಎಸ್ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಡಿಸೆಂಬರ್ 18ರ ಭಾನುವಾರ ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ (ಜೆ.ಎಸ್.ಎಸ್ ) ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ … Continued

ಧಾರವಾಡ: ಹೆಸರಾಂತ ವಿದ್ವಾಂಸ ಪಂ. ಜಯತೀರ್ಥ ಆಚಾರ್ಯ ಮಳಗಿ ನಿಧನ

ಧಾರವಾಡ: ವಿದ್ವಾಂಸ ಪಂಡಿತ ಜಯತೀರ್ಥಾಚಾರ್ಯ ಮಳಗಿ ಅವರು ಇಂದು, ಭಾನುವಾರ ನಿಧನರಾದರು. ಅವರಿಗೆ 73  ವರ್ಷ ವಯಸ್ಸಾಗಿತ್ತು. ಮೃತರು ಒಬ್ಬ ಮಗ, ಒಬ್ಬ ಮಗಳು, ಬಂಧು ಬಳಗ ಹಾಗೂ ಅಪಾರ ಶಿಷ್ಯವರ್ಗ, ಬಂಧಗಳನ್ನು ಅಗಲಿದ್ದಾರೆ. ಪಂಡಿತ ಜಯತೀರ್ಥಾಚಾರ್ಯ ವಾಸುದೇವಾಚಾರ್ಯ ಮಳಗಿ ಅವರು ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ವೇದವ್ಯಾಸ ಅನೇಕ ಗ್ರಂಥಗಳ ಕರ್ತೃವಾಗಿ, ಧಾರ್ಮಿಕ ಪತ್ರಿಕೆಗಳ … Continued

ಜೆಎಸ್ಎಸ್‌ನ ನೂತನ ಐಟಿಐ ಉದ್ಘಾಟನೆ : ಶೈಕ್ಷಣಿಕ ಹರಿಕಾರ ಡಾ. ನ. ವಜ್ರಕುಮಾರ ಹೆಸರು ನಾಮಕರಣ

ಧಾರವಾಡ : ಕೌಶಲ್ಯ ತರಬೇತಿಗಳಿಗೆ ಈಗ ಅಪಾರ ಬೇಡಿಕೆಯಿದೆ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯುವ ಕಾರ್ಮಿಕ ವರ್ಗದವರನ್ನು ಇಂದು ಗುರುತಿಸುವ ಅಗತ್ಯವಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಆರಂಭಗೊಂಡ ನೂತನ ಐ.ಟಿ.ಐ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ನೂತನ ಐಟಿಐಗೆ ಡಾ. ವಜ್ರಕುಮಾರ … Continued

ಧಾರವಾಡದ ಕೆಸಿಸಿ ಬ್ಯಾಂಕ್​ನಲ್ಲಿ 87 ಕ್ಲರ್ಕ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಡಿಗ್ರಿಯಾದವರಿಗೆ ಅವಕಾಶ

ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್​ನಲ್ಲಿ ( KCCBank) ನೇರ ನೇಮಕಾತಿ ಮೂಲಕ ಒಟ್ಟು 87 ಕ್ಲರ್ಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 30 ಆಗಿದೆ. ಬ್ಯಾಂಕ್ -ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್ … Continued

ಕೋರ್ಟ್‌ಗೆ ಪೊಲೀಸರು ಕರೆತಂದಿದ್ದ ಕೊಲೆ ಪ್ರಕರಣದ ಆರೋಪಿ ಯುವತಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ…!

ಧಾರವಾಡ : ಕೊಲೆ ಪ್ರಕರಣದ ವಿಚಾರಣೆಗಾಗಿ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಆರೋಪಿಯೊಬ್ಬರು ಸಮೀಪದ ಸತ್ತೂರಿನ ಲಾಡ್ಜ್‌ ಒಂದರಲ್ಲಿ ಯುವತಿ ಜೊತೆಗಿದ್ದ ಘಟನೆ ನಡೆದಿದೆ. ನಂತರ ಲಾಡ್ಡ್ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಫ್ರೂಟ್ ಇರ್ಫಾನ್ ಕೊಲೆ ಪ್ರಕರಣದ ಆರೋಪಿ ಬಚ್ಚಾ ಖಾನ್‌ ಎಂಬಾತನನ್ನು ಬಳ್ಳಾರಿ ಕಾರಾಗೃಹದಲ್ಲಿ ಇಡಲಾಗಿತ್ತು. … Continued

ಅದ್ವೈತ-2022 ಸ್ಪರ್ಧೆ: ಜೆಎಸ್‌ಎಸ್‌ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಬಿಬಿಎ ತಂಡಕ್ಕೆ “ಬೆಸ್ಟ್ ಮ್ಯಾನೇಜರ್” ಪ್ರಶಸ್ತಿ

ಅದ್ವೈತ-೨೦೨೨ ರ ಸ್ಪರ್ಧೆಯಲ್ಲಿ ಭಾಗವಹಿಸಿ “ಬೆಸ್ಟ್ ಮ್ಯಾನೇಜರ್” ಪ್ರಶಸ್ತಿ ಧಾರವಾಡ: ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಬಿ.ಎ ವಿಭಾಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ತಂಡವು ಬೆಳಗಾವಿಯ ಗೋಗಟೆ ಮಹಾವಿದ್ಯಾಲಯದ ಅದ್ವೈತ-2022 ಸ್ಪರ್ಧೆಯಲ್ಲಿ ಭಾಗವಹಿಸಿ “ಬೆಸ್ಟ್ ಮ್ಯಾನೇಜರ್” ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಜನತಾ ಶಿಕ್ಷಣ ಸಮಿತಿಯ ಪರವಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ … Continued