ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ. … Continued

ಡಿಕೆ ಶಿವಕುಮಾರ ನಾಳೆಯೇ ಸಿಎಂ ಆಗೋದಾದ್ರೆ ಅವ್ರಿಗೆ 19 ಜೆಡಿಎಸ್ ಶಾಸಕರ ಬೆಂಬಲ: ಆಫರ್‌ ನೀಡಿದ ಕುಮಾರಸ್ವಾಮಿ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ​ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ ಮಾಡಿದ್ದಾರೆ…. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಮುಖ್ಯಮಂತ್ರಿ ಆಗುವುದಾದರೆ ಆದರೆ ನಾವು ಬೆಂಬಲ ನೀಡುತ್ತೇವೆ ಎಂದರು. ಸುಮ್ಮನೆ ಜೆಡಿಎಸ್‌ನಿಂದ ಐದು ಜನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued

ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲು

 ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಮೇಶ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. … Continued

ಡಿ.ಕೆ. ಶಿವಕುಮಾರ ಕಾಣೆಯಾಗಿದ್ದಾರೆ, ಹುಡುಕಿಕೊಟ್ಟವರಿಗೆ….: ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕುರಿತು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ‘ಡಿ.ಕೆ.ಶಿವಕುಮಾರ್​ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ’ ಎಂದು ಕಾಣೆಯಾದವರ ಜಾಹೀರಾತು ಮಾದರಿಯಲ್ಲಿ ಪೋಸ್ಟರ್​ ರಚಿಸಿ ಹಂಚಿಕೊಂಡಿದೆ. “ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್‌ ನಾಡಿಗೆ ಬೇಕಾಬಿಟ್ಟಿಯಾಗಿ … Continued

ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ ನೇಮಕ

ಬೆಂಗಳೂರು : ಒಂದು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ … Continued

ಆಪರೇಷನ್‌ ಹಸ್ತ ; ಬೇರೆ ಬೇರೆ ಪಕ್ಷಗಳ 42ಕ್ಕೂ ಹೆಚ್ಚು ನಾಯಕರ ಅರ್ಜಿ ನನ್ನ ಮುಂದಿದೆ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು : ಕಾಂಗ್ರೆಸ್ ಸೇರಲು ಕಾಯುತ್ತಿರುವ ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಅವರ ಹೆಸರುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೇರೆ ಪಕ್ಷದ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಮತ್ತು ಲಕ್ಷ್ಮಣ ಸವದಿ … Continued

ಕಾವೇರಿ ಸಭೆ : ಕಾನೂನು ಸಲಹಾ ಸಮಿತಿ ರಚಿಸಲು ಸಿಎಂಗೆ ತಜ್ಞರ ಸಲಹೆ

ಬೆಂಗಳೂರು : ಕಾವೇರಿ ಸೇರಿದಂತೆ ರಾಜ್ಯದ ಎಲ್ಲಾ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹಾ ಸಮಿತಿ ರಚಿಸುವಂತೆ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ ಪಾಲ್ಗೊಂಡಿದ್ದ ಶುಕ್ರವಾರ … Continued