ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು : “ಸಾರ್ವಜನಿಕರ ಕುಂದುಕೊರತೆಗಳು, ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇದಕ್ಕಾಗಿಯೇ  ಪ್ರತ್ಯೇಕವಾಗಿ ಸಚಿವರನ್ನು ನೇಮಿಸಿ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಹೇಳಿದರು. “ಜನರ ಕಷ್ಟ ಅರಿತು, ಕಾನೂನು … Continued

ಗ್ಯಾರೆಂಟಿ ಯೋಜನೆಗಳ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ ಸೂಚನೆ

ಬೆಂಗಳೂರು : ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಆದರೆ ಇದೇ ವೇಳೆ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗಳ ದುರ್ಬಳಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಧಿಕಾರಿಗಳ ಜೊತೆ ಸಭೆ … Continued

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಂಭ್ರಮ ತಂದಿದ್ದರೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ತೀವ್ರ ಮುಜುಗರ ತಂದಿಟ್ಟಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳು ಸ್ಥಾನಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಬಿಜೆಪಿ ಎರಡರಲ್ಲಿ ಜಯಗಳಿಸಿದೆ. ಆದರೆ, ಈ ಎಲ್ಲದರ ನಡುವೆ ವಿಪಕ್ಷಗಳ ಶಾಸಕರು ದೊಡ್ಡ ಮಟ್ಟದಲ್ಲಿ ‘ಕ್ರಾಸ್ ವೋಟಿಂಗ್’ (ಅಡ್ಡ … Continued

ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆಸಿದರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಡಿಎಫ್‌ಒಗಳ ಜೊತೆಗೆ … Continued

ಮುಗಿಯದ ಸಿಎಂ ಡಿ.ಕೆ. ಶಿವಕುಮಾರ ತಲೆನೋವು : ಹೈಕಮಾಂಡ್ ಕದ ತಟ್ಟಿದ ಸಚಿವರು, ಆಕಾಂಕ್ಷಿಗಳು !

ಬೆಂಗಳೂರು: ಕರ್ನಾಟಕದಲ್ಲಿ ನೂತನವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸಚಿವ ಸಂಪುಟದ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಶಮನಗೊಳಿಸುವ ದೊಡ್ಡ ಸವಾಲು ಎದುರಾಗಿದೆ. ಕಳೆದ ವಾರವಷ್ಟೇ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನವನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಶಿವಕುಮಾರ ಅವರಿಗೆ, ಇದೀಗ ಮತ್ತಷ್ಟು ಆಂತರಿಕ ಅಸಮಾಧಾನದ ಬಿಸಿ ತಟ್ಟುವ ಮುನ್ಸೂಚನೆಗಳು … Continued

ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued

ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ರಣದೀಪ ಸುರ್ಜೇವಾಲಾ

ಬೆಂಗಳೂರು : ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಕ್ಕಟ್ಟು ಶಮನಗೊಂಡಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ಸಿನ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಪ್ರಕಟಿಸಿದ್ದಾರೆ. ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ನಡೆಸಿದ ಉನ್ನತ ಮಟ್ಟದ ಸುದೀರ್ಘ ಚರ್ಚೆಗಳ ನಂತರ ಈ ಮಹತ್ವದ ಬೆಳವಣಿಗೆ … Continued

ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued