ಇಂದು ಮಧ್ಯಾಹ್ನ 2:30ಕ್ಕೆ ಸಿದ್ದರಾಮಯ್ಯ ರಾಜೀನಾಮೆ ; ನೂತನ ಸಿಎಂ ಆಗಲು ಡಿಕೆ ಶಿವಕುಮಾರ ಸಜ್ಜು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಮೂರು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಧಿಕೃತವಾಗಿ ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ಹಿರಿಯ ನಾಯಕ, ಉಪಮುಖ್ಯಮಂತ್ರಿ ಡಿ.ಕೆ. … Continued

ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಅಧಿಕೃತ ಚಾಲನೆ … Continued

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !

 ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವದಂತಿಗಳು ಬುಧವಾರದ ಹಠಾತ್ ಬೆಳವಣಿಗೆಗಳಿಂದಾಗಿ ಮತ್ತಷ್ಟು ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ( ಮೇ 28) ಬೆಳಿಗ್ಗೆ ಕರೆದಿರುವ ನಿರ್ಣಾಯಕ ಉಪಾಹಾರ ಕೂಟದ (Breakfast Meeting) ಮೇಲೆ ಈಗ ಇಡೀ ರಾಜ್ಯದ ರಾಜಕೀಯ ವಲಯದ ಕಣ್ಣು ನೆಟ್ಟಿದ್ದು,  ಸಿದ್ದರಾಮಯ್ಯ … Continued

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ : ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ದರಾಮಯ್ಯ ?

ಬೆಂಗಳೂರು: ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವೆ ನಡೆದ ಸುದೀರ್ಘ ಸಭೆಗಳ ನಂತರ ಕರ್ನಾಟಕದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಮತ್ತೊಮ್ಮೆ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಈ ವರದಿಗಳನ್ನು “ಕೇವಲ ವದಂತಿಗಳು” ಎಂದು ಹೇಳಿದೆ. ಹಾಗೂ ನಾಯಕತ್ವದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು … Continued

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರದ ನಂತರ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಂಗೀಕರಿಸಿದ್ದಾರೆ. ಅಲ್ಲದೆ, ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ … Continued

ಜರ್ಮನ್ ಚಾನ್ಸಲರ್ ನಿರ್ಲಕ್ಷಿಸಿ ರಾಹುಲ್ ಗಾಂಧಿ ಸ್ವಾಗತಕ್ಕೆ ಸಿಎಂ, ಡಿಸಿಎಂ ಆದ್ಯತೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್ ಅವರ ಸ್ವಾಗತಕ್ಕೆ ಸಚಿವರೊಬ್ಬರನ್ನು ನಿಯೋಜಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲು ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಕಾಂಗ್ರೆಸ್‌ಗೆ ‘ಹೈಕಮಾಂಡ್ ಓಲೈಕೆ’ಯೇ ಮುಖ್ಯವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಜರ್ಮನ್ ಚಾನ್ಸಲರ್ … Continued

‘ಡ್ಯಾಡಿ ಈಸ್ ಬ್ಯಾಕ್’: ಸಿದ್ದರಾಮಯ್ಯ, ಡಿಕೆಶಿ, ಎಚ್.ಡಿ. ಕುಮಾರಸ್ವಾಮಿಯ ಎಐ ವೀಡಿಯೊ ವೈರಲ್…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೃತಕ ಬುದ್ಧಿಮತ್ತೆ (AI) ಸೃಜಿತ ವೀಡಿಯೊವೊಂದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಎಐ ಅವತಾರಗಳನ್ನು ಒಳಗೊಂಡ ಈ ವೀಡಿಯೊ ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಟ್ವಿಟರ್‌ನಲ್ಲಿ (X) ಫ್ಯಾನ್‌ … Continued

ಅಸ್ಸಾಂ ವಿಧಾನಸಭೆ ಚುನಾವಣೆಗೆ ತಯಾರಿ : ಕಾಂಗ್ರೆಸ್ ಹಿರಿಯ ವೀಕ್ಷಕರಾಗಿ ಡಿ.ಕೆ. ಶಿವಕುಮಾರ ನೇಮಕ

ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಸಿದ್ಧತೆ ನಡೆಸಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಎಐಸಿಸಿ (AICC) ಬುಧವಾರ ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರ ತಂಡವನ್ನು ಘೋಷಿಸಿದ್ದು, ಡಿ.ಕೆ. ಶಿವಕುಮಾರ ಅವರೊಂದಿಗೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಘೇಲ್ ಮತ್ತು ಜಾರ್ಖಂಡ್‌ನ ಮಾಜಿ ಶಾಸಕ ಬಂಧು … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Continued

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ

ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued