ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಪ್ರಕರಣ : ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್‌

ನವದೆಹಲಿ : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ಹಾಲಿ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ … Continued

ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ : ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೂ ಸೊಪ್ಪು ಹಾಕದ ಸಿ. ಪಿ. ಯೋಗೇಶ್ವರ ಬುಧವಾರ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಯೋಗೇಶ್ವಶ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ … Continued

ಚನ್ನಪಟ್ಟಣ ಉಪಚುನಾವಣೆ | ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದ ಯೋಗೇಶ್ವರ ; ಕಾಂಗ್ರೆಸ್‌ ಸೇರ್ಪಡೆ ಈಗ ಔಪಚಾರಿಕ

ಬೆಂಗಳೂರು: ಭಾರೀ ಕೂತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. … Continued

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಶೋಕಾಸ್‌ ನೋಟಿಸ್‌ ಹಿಂಪಡೆಯಲಿ : ಸಚಿವ ಸಂಪುಟದಲ್ಲಿ ನಿರ್ಣಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರವಾಗಿದೆ ಎಂದು ಮುಖ್ಯಮಂತ್ರಿಯವರ ವಿರುದ್ಧ ನೀಡಲಾಗಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್‌ ನೋಟಿಸ್‌ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಸಲಹೆ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ … Continued

ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮಾರ್ಗದ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಲೋಕಾರ್ಪಣೆ

ಬೆಂಗಳೂರು : ಬೆಂಗಳೂರಿನ ರಾಗಿಗುಡ್ಡದಲ್ಲಿ ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆಯನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಲೋಕಾರ್ಪಣೆ ಮಾಡಿದರು. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ನ್ನು ನಿರ್ಮಾಣ ಮಾಡಲಾಗಿದ್ದು, ಇದು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ ನಿರ್ಮಾಣವಾಗಿದೆ. ಡಬ್ಬಲ್ ಡೆಕ್ಕರ್‌ ಮೊದಲ ಫ್ಲೈ ಓವರ್‌ ಎರಡೂ ಬದಿಗಳಲ್ಲಿ ಎರಡು … Continued

ಡಿಕೆ ಶಿವಕುಮಾರಗೆ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಲಿ : ಸಿಎಂ ಸಮ್ಮುಖದಲ್ಲೇ ಸ್ವಾಮೀಜಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಮುಖ್ಯಮಂತ್ರಿ ಸಿದರಾಮಯ್ಯ ಅವರ ಮುಂದೆಯೇ ಡಿಕೆ ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಸ್ವಾಮೀಜಿಯೊಬ್ಬರು ನೇರವಾಗಿ ಒತ್ತಾಯಿಸಿದ ವಿದ್ಯಮಾನ ನಡೆದಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, … Continued

ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

ಬೆಂಗಳೂರು: ‘ಅಕಾಡೆಮಿ, ಪ್ರಾಧಿಕಾರಗಳು ಹಾಗೂ ಸಾಹಿತಿಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ಕಾಂಗ್ರೆಸ್‌ ಪಕ್ಷದ ನಿಲುವೂ ಆಗಿದೆ. ಸಾಹಿತಿ, ಕಲಾವಿದರು, ಸಂಸ್ಕೃತಿ ಚಿಂತಕರನ್ನು ಯಾವುದೇ ಪಕ್ಷದ ಅಡಿಯಾಳುಗಳಂತೆ ಕಾಣುವುದು ಸರಿಯಾದ ನಡವಳಿಕೆಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ‘ಜಾಗೃತ ನಾಗರಿಕರು-ಕರ್ನಾಟಕ’ದ ಪ್ರಮುಖರು ಹೇಳಿದ್ದು, ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂಬ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿರುವ ವಕೀಲ ದೇವರಾಜೇ ಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಶ್ಲೀಲ ವೀಡಿಯೊಗಳಿರುವ ಪೆನ್‌‌ಡ್ರೈವ್ ಹಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ಮಾಡಿದ್ದೇನೆ ಎಂದು ಹೇಳಿದರೆ 100 ಕೋಟಿ ರೂಪಾಯಿ ಕೊಡುವುದಾಗಿ … Continued

ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued