ಡಿಕೆಶಿ ರಾಜಕಾರಣಕ್ಕೆ ನಾಲಾಯಕ್‌, ಆತನ ವಿರುದ್ಧ ದೂರು ದಾಖಲಿಸ್ತೇನೆ, ಅವನಂಥ ನೀಚ ರಾಜಕಾರಣಿ ನೋಡ್ಲಿಲ್ಲ ಎಂದು ಗುಡುಗಿದ ರಮೇಶ ಜಾರಕಿಹೊಳಿ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಅವನು ಗಂಡಸಲ್ಲ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿರಪರಾಧಿ … Continued

ನಮ್ಮ ಅಕ್ಕನನ್ನು ಒತ್ತೆಯಾಳಾಗಿಟ್ಟುಕೊಂಡು ಡಿ.ಕೆ. ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ; ಸಿಡಿ ಯುವತಿ ಸಹೋದರನ ನೇರ ಆರೋಪ

ಬೆಂಗಳೂರು; ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. … Continued

ನನ್ನ ಭೇಟಿಗೆ ಯುವತಿ ಬಂದಿರಬಹುದು. ನಾನು ಭೇಟಿ ಮಾಡಿಲ್ಲ: ಡಿಕೆಶಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಭೇಟಿಗೆ ಪ್ರಯತ್ನಿಸಿದ್ದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಯುವತಿ ನಮ್ಮ ಕಚೇರಿಗೆ ಬಂದಿರಬಹುದು. ಆದರೆ ಆ ಯುವತಿ ನನ್ನನ್ನು ಭೇಟಿಯಾಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ … Continued

ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ: ಕಾಂಗ್ರೆಸ್‌ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಟ್ವೀಟ್‌ ಮಾಡಿದ್ದು, ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ. … Continued

ಯುವತಿಯದ್ದು ಎನ್ನಲಾದ ಆಡಿಯೋ ವೈರಲ್‌.. ಡಿಕೆಶಿ ಹೆಸರು ಪ್ರಸ್ತಾಪ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಶುಕ್ರವಾರ ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋದಲ್ಲಿ ಯುವತಿಯು ಸಹೋದರ ಮತ್ತು ತಾಯಿ ಜೊತೆ ದೂರವಾಣಿಯಲ್ಲಿ … Continued

ಸಿಡಿ ಮಹಿಳೆ ಸಿದ್ದರಾಮಯ್ಯ- ಡಿಕೆಶಿ ಬಳಿ ರಕ್ಷಣೆ ಕೋರಿರುವ ಮಾಹಿತಿ ಇಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಮಹಿಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. . … Continued

ಸಿಡಿ ಪ್ರಕರಣ: ಮಹಾನ್‌ ನಾಯಕ ಅಂದ್ರೆ ತಾವೇ ಎಂದು ಡಿಕೆಶಿ ಯಾಕೆ ತಿಳ್ಕೊಂಡ್ರೋ ಗೊತ್ತಿಲ್ಲ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರ ಹೆಸರು ಹೇಗೆ ಬಂತೋ ನನಗೆ ಗೊತ್ತಿಲ್ಲ. ರಮೇಶ ಜಾರಕಿಹೊಳಿ ಮಹಾನಾಯಕರು ಎಂದು ಹೇಳಿದ್ದನ್ನು ಡಿ.ಕೆ. ಶಿವಕುಮಾರ ತಮಗೇಕೆ ಅನ್ವಯಿಸಿಕೊಂಡರೋ ಎಂಬದೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ … Continued

ಡಿಕೆಶಿ ಹೇಳಿಕೆಗೆ ಅವರೇ ಉತ್ತರ ಕೊಡಬೇಕು: ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆ ಬಗ್ಗೆ ಡಿಕೆಶಿ ವಿವರಣೆ ಕೊಡಬೇಕೇ ಹೊರತು ಅದಕ್ಕೆ ನಾನೇನು ಹೇಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿಡಿ ಪ್ರಕರಣದಲ್ಲಿ ಇನ್ನೊಬ್ಬರನ್ನು ಸಿಲುಕಿಸುವ ವಿಚಾರ ನನಗೆ ಗೊತ್ತಿಲ್ಲ. ಅದು ಡಿ.ಕೆ.ಶಿವಕುಮಾರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೆ … Continued

ಕಾಂಗ್ರೆಸ್‌ ನಾಯಕರ ಕಚ್ಚಾಟಕ್ಕೆ ಸುರ್ಜೆವಾಲಾರ ಮುಲಾಮು…?

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕರ ನಡುವೆ ಪರಸ್ಪರ ಕಿತ್ತಾಟ ಹೆಚ್ಚಾಗಿದ್ದು,ಅದು ಈಗ ತಾರಕಕ್ಕೂ ಹೋಗಿದೆ. ಹೊಂದಾಣಿಕೆಯ ಕೊರತೆಯಿಂದಾಗಿ ಗುಂಪುಗಾರಿಕೆಯೂ ಹೆಚ್ಚಾದಂತೆ ಕಂಡುಬರುತ್ತಿದೆ. ಮೈಸೂರು ಮೇಯರ್‌ ಆಯ್ಕೆ ಗೊಂದಲದ ನಂತರ ಕಾಂಗ್ರೆಸ್‌ನ ಆಂತರಿಕ ಕಿತ್ತಾಟ, ಗುಂಪುಗಾರಿಕೆಯ ವಿಷಯ ದೆಹಲಿಯ ಕಾಂಗ್ರೆಸ್‌ನ ಹೈಕಮಾಂಡ್‌ ಅಂಗಳದ ವರೆಗೂ ಹೋಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ … Continued

53 ಲಕ್ಷ ರೂ. ಹಿಂದಿರುಗಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಪ್ತ ಸಚಿನ್‌ ನಾರಾಯಣ್‌ ಮನೆ ಮತ್ತವರ ಕಂಪನಿ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 53 ಲಕ್ಷ ರೂ. ಹಣ ಬಿಡುಗಡೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ಸೂಚಿಸಿದೆ. ಡಿ.ಕೆ.ಶಿವಕುಮಾರ್‌ ದೆಹಲಿಯ ಫ್ಲಾಟ್‌ ಹಾಗೂ ಮನೆಯಲ್ಲಿ 2017ರಲ್ಲಿ ಏಳುಕೋಟಿ ರೂಪಾಯಿಗೂ ಅಧಿಕ ನಗದು ದೊರೆತ … Continued