ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. … Continued

ಈಗ ಕಾಲ ಪಕ್ವವಾಗಿದೆ..ರಾಜಕೀಯಕ್ಕೆ ಮರಳುವೆ ಎಂದು ಘೋಷಿಸಿದ ಮಾಜಿ ಸಿಎಂ ಜಯಲಲಿತಾ ಆಪ್ತೆ…

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಆಪ್ತರಾದ ವಿ.ಕೆ. ಶಶಿಕಲಾ ಅವರು ತಮ್ಮ ರಾಜಕೀಯ ಪ್ರವೇಶದ ಘೋಷಣೆ ಮಾಡಿದ್ದಾರೆ. ಹಾಗೂ 2026ರ ಚುನಾವಣೆಯಲ್ಲಿ ಎಐಎಡಿಎಂಕೆಯನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಐಎಡಿಎಂಕೆ ತನ್ನ ಇತ್ತೀಚಿನ ಚುನಾವಣಾ ಸೋಲಿನ ದೃಷ್ಟಿಯಲ್ಲಿ ಅದನ್ನು ಕ್ಷೀಣಿಸಿದೆ ಎಂದು … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ … Continued

ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಂಕೆ ಪತ್ರ : ತಕ್ಷಣವೇ ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ/ ಚೆನ್ನೈ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಡಿಎಂಕೆ ನೀಡಿರುವ ದೂರು ಆಧರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನಿರ್ದೇಶನ ನೀಡಿದೆ. “ಮಾರ್ಚ್ 1 ರಂದು ನಡೆದ ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ತಮಿಳುನಾಡಿನ … Continued

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಚೆನ್ನೈ/ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಲ್ಲದೆ, ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ಧಾರೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆ … Continued

ಚುನಾವಣಾ ಬಾಂಡ್ ಮೂಲಕ ಅತಿಹೆಚ್ಚು ಹಣ ಸ್ವೀಕರಿಸಿದ ಪಕ್ಷ ಬಿಜೆಪಿ ; ಅತಿಹೆಚ್ಚು ದಾನ ನೀಡಿದ ಫ್ಯೂಚರ್ ಗೇಮಿಂಗ್ ನಿಂದ ಡಿಎಂಕೆಗೆ ಸಿಂಹಪಾಲು : ಎಷ್ಟು ಗೊತ್ತೆ..?

ನವದೆಹಲಿ : ಚುನಾವಣಾ ಬಾಂಡ್‌ಗಳನ್ನು 2018 ರಲ್ಲಿ ಪರಿಚಯಿಸಿದಾಗಿನಿಂದ ಈ ಬಾಂಡ್‌ಗಳ ಮೂಲಕ ಗರಿಷ್ಠ ಹಣ 6,986.5 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್-1,397 ಕೋಟಿ ರೂ., ಕಾಂಗ್ರೆಸ್ -1,334 ಕೋಟಿ ರೂ. ಮತ್ತು ಬಿಆರ್‌ಎಸ್ 1,322 ಕೋಟಿ ರೂ. ಹಣ ಸ್ವೀಕರಿಸಿದೆ. ಚುನಾವಣಾ ಬಾಂಡ್‌ಗಳ ಅಗ್ರ ಖರೀದಿದಾರರಾದ ಫ್ಯೂಚರ್ … Continued

ತಮಿಳುನಾಡಿನಲ್ಲಿ 2019ರ ಸೂತ್ರದಂತೆ ಸ್ಥಾನ ಹಂಚಿಕೆ ಮಾಡಿದ ಡಿಎಂಕೆ : ಕಾಂಗ್ರೆಸ್ಸಿಗೆ 9 ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ತನ್ನ ಮಿತ್ರ ಪಕ್ಷವಾದ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಡಿಎಂಕೆ ಪಕ್ಷವು ತನ್ನ ಇಂಡಿಯಾ ಬ್ಲಾಕ್ ಮಿತ್ರವಾದ ಕಾಂಗ್ರೆಸ್ಸಿಗೆ ತಮಿಳುನಾಡಿನಲ್ಲಿ ಒಂಬತ್ತು ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿ ಒಂದು ಸ್ಥಾನವನ್ನು ನೀಡಿದೆ. ಡಿಎಂಕೆಯ 2019 ರ ಸೀಟು ಹಂಚಿಕೆಯ ಸೂತ್ರದಂತೆ ಈ ಬಾರಿಯೂ … Continued

₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಆರೋಪ: ಚಲನಚಿತ್ರ ನಿರ್ಮಾಪಕನ ಬಂಧನ

ನವದೆಹಲಿ: ₹ 2,000 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ದೇಶದಿಂದ ಹೊರಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕನನ್ನು ಬಂಧಿಸಲಾಗಿದೆ. ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಡಿಎಂಕೆ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಎಂಬವನನ್ನು ನಾಲ್ಕು ತಿಂಗಳ ಶೋಧದ ನಂತರ ಬಂಧಿಸಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶನಿವಾರ ತಿಳಿಸಿದೆ. ಎನ್‌ಸಿಬಿ (NCB) … Continued