ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued

ತಮಿಳುನಾಡು ಚುನಾವಣೆ 2026 : ಎನ್‌ಡಿಎ-ಡಿಎಂಕೆ ನಡುವಿನ ಜಿದ್ದಾಜಿದ್ದಿಯಲ್ಲಿ ಗೆಲ್ಲೋದು ಯಾರು ; ‘ಮ್ಯಾಟ್ರಿಜ್’ ಸಮೀಕ್ಷೆ ಹೇಳಿದ್ದೇನು ?

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣ ಸಜ್ಜಾಗುತ್ತಿದ್ದು,  ಆಡಳಿತಾರೂಢ ಡಿಎಂಕೆ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂದು ‘ಮ್ಯಾಟ್ರಿಜ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಮುನ್ಸೂಚನೆ ನೀಡಿದೆ. ಸೋಮವಾರ ಪ್ರಕಟವಾದ ಈ ಸಮೀಕ್ಷಾ ವರದಿಯು, ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಲ್ಪ … Continued

ತಮಿಳುನಾಡು ಚುನಾವಣೆ ಸನಿಹದಲ್ಲಿ ಡಿಎಂಕೆ ಸೇರಿದ ಓ. ಪನ್ನೀರ್‌ಸೆಲ್ವಂ

ಚೆನ್ನೈ: ಎಐಎಡಿಎಂಕೆಯಿಂದ ಉಚ್ಚಾಟಿತಗೊಂಡಿದ್ದ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ (ಒಪಿಎಸ್) ಅವರು ಶುಕ್ರವಾರ ಅಧಿಕೃತವಾಗಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಮ್ಮ ಹಳೆಯ ಪಕ್ಷದಲ್ಲಾದ “ಕಹಿ ಅನುಭವಗಳೇ” ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದು, ಇದು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ. … Continued

ಆಘಾತಕಾರಿ ಘಟನೆ | ರಸ್ತೆ ಜಗಳ ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ, ಓರ್ವ ಸಾವು

ಕೃಷ್ಣಗಿರಿ : ತಮಿಳುನಾಡಿನಲ್ಲಿ ನಡೆದ ‘ರೋಡ್ ರೇಜ್’ (ರಸ್ತೆ ಜಗಳ) ಘಟನೆಯೊಂದರಲ್ಲಿ, ಕುಟುಂಬವೊಂದರ ನಾಲ್ವರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಡಿಎಂಕೆ (DMK) ನಾಯಕನ 20 ವರ್ಷದ ಪುತ್ರನನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮುಖ್ಯ ಆರೋಪಿಯನ್ನು ಆದಿತ್ಯ ಎಂದು ಗುರುತಿಸಲಾಗಿದ್ದು, ಘಟನೆಯ ಸಮಯದಲ್ಲಿ ವಾಹನದಲ್ಲಿದ್ದ ಆತನ ಸ್ನೇಹಿತರಾದ ರಿತಿಕ್ ಕುಮಾರ ಮತ್ತು … Continued

ಉತ್ತರ ಭಾರತದ ಮಹಿಳೆಯರ ಕುರಿತು ಡಿಎಂಕೆ ನಾಯಕ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತ ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಕೆ ಮಾಡಿ ನೀಡಿರುವ ಹೇಳಿಕೆಯೊಂದು ಇದೀಗ ದೊಡ್ಡ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಚೆನ್ನೈನ ಕ್ವೈಡ್-ಎ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಮಾರನ್, “ತಮಿಳುನಾಡಿನಲ್ಲಿ ಹೆಣ್ಣುಮಕ್ಕಳಿಗೆ ಓದಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆ ಮನೆಗೆ … Continued

ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಚಿತ್ರಕ್ಕೆ ತಮಿಳುನಾಡು ಯೂತ್ ಕಾಂಗ್ರೆಸ್ ವಿರೋಧ: ಕಾರಣ…?

 ಚೆನ್ನೈ: ತಮಿಳುನಾಡಿನ ಖ್ಯಾತ ನಟ ಶಿವಕಾರ್ತಿಕೇಯನ್ ಅಭಿನಯದ ಇತ್ತೀಚಿನ ಚಿತ್ರ ‘ಪರಾಶಕ್ತಿ’ (Parasakthi) ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ತಮಿಳುನಾಡು ಯೂತ್ ಕಾಂಗ್ರೆಸ್, ಚಿತ್ರವನ್ನು ತಕ್ಷಣವೇ ನಿಷೇಧಿಸಬೇಕೆಂದು ಒತ್ತಾಯಿಸಿದೆ. ಸುಧಾ ಕೊಂಗರ ಪ್ರಸಾದ ನಿರ್ದೇಶನದ ಈ ಸಿನಿಮಾ ಜನವರಿ 10 ರಂದು ಬಿಡುಗಡೆಯಾಗಿತ್ತು. 1960 … Continued

ಸಿಂಹ ಯಾವಾಗಲೂ ಸಿಂಹವೇ : 2026ರ ಚುನಾವಣೆಯಲ್ಲಿ ಡಿಎಂಕೆ, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಘೋಷಿಸಿದ ತಮಿಳು ನಟ ವಿಜಯ

ಮಧುರೈ : “ಸಿಂಹ ಯಾವಾಗಲೂ ಸಿಂಹವೇ,” ಎಂದು ನಟ ವಿಜಯ್ ಗುರುವಾರ ಮಧುರೈನಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ ಘರ್ಜಿಸಿದ್ದಾರೆ. ತಮ್ಮ ಪಕ್ಷದ ಟಿವಿಕೆಯ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಕ್ಷದ ಸಾವಿರಾರು ಬೆಂಬಲಿಗರ ಮುಂದೆ ಅವರು ಘರ್ಜಿಸಿದ್ದಾರೆ. ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೆಂಬಲಿಗರನ್ನು ಒಟ್ಟುಗೂಡಿಸಲು ಪ್ರಯತ್ನಿಸುವ ಬಹುದೊಡ್ಡ ಸಮಾವೇಶದಲ್ಲಿ ಮಾತನಾಡಿದ್ದಾರೆ. ಸಾಂಕೇತಿಕತೆ … Continued

ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued

ರಾಜ್ಯಸಭೆ ಪ್ರವೇಶಿಸಲು ಸಿದ್ಧರಾದ ನಟ ಕಮಲ ಹಾಸನ್‌

ಚೆನ್ನೈ: ಅಭಿಜಾತ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ)ಪಕ್ಕಕ್ಕೆ ಡಿಎಂಕೆ ಕೋಟಾದ ಒಂದು ಸ್ಥಾನವನ್ನು ಮೀಸಲಿಡಲಾಗಿದೆ. ಡಿಎಂಕೆಯು ಪಿ ವಿಲ್ಸನ್ ಅವರನ್ನು ಎರಡನೇ ಅವಧಿಗೆ … Continued