ಮದುವೆ ಮಂಟಪಕ್ಕೆ ನುಗ್ಗಿ 60ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಬೀದಿ ನಾಯಿ…!

ಬುದೌನ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಮದುವೆ ಸಮಾರಂಭವೊಂದರಲ್ಲಿ ಬೀದಿ ನಾಯಿಗಳು ಅಟ್ಟಹಾಸ ಮೆರೆದಿದ್ದು, ಮದುವೆ ಸಮಾರಂಭಕ್ಕೆ ನುಗ್ಗಿದ ನಾಯಿ 60ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದೆ. ವಧುವಿನ ಬೀಳ್ಕೊಡುಗೆಯ (Farewell) ಸಂಭ್ರಮದಲ್ಲಿದ್ದ ಜನರು ನಾಯಿ ದಾಳಿಯಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಸೋಮವಾರ ಬಿಸೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಲ್ಸಿ ರಸ್ತೆಯಲ್ಲಿರುವ ‘ಅಭಿನಂದನ್ ಬ್ಯಾಂಕ್ವೆಟ್ … Continued

ಎರಡು ಬಾರಿ ಕಚ್ಚುವ ಬೀದಿ ನಾಯಿಗಳಿಗೆ ಜೀವಾವಧಿ ಶಿಕ್ಷೆ …! ಏನಿದು ಆದೇಶ…?

ಲಕ್ನೋ: ನಾಯಿ ಕಡಿತದ ಘಟನೆಗಳನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸರ್ಕಾರವು ನೂತನ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ, ಜನರನ್ನು ಎರಡು ಬಾರಿ ಕಚ್ಚುವ ಯಾವುದೇ ಬೀದಿ ನಾಯಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುತ್ತದೆ, ಇದು ಬೀದಿ ನಾಯಿಗಳ ಹೆಚ್ಚುತ್ತಿರುವ ಉಪಟಳವನ್ನು ತಡೆಯುವ ಉದ್ದೇಶ ಹೊಂದಿರುವ ಹೊಂದಿರುವ ವಿವಾದಾತ್ಮಕ ಹೆಜ್ಜೆಯಾಗಿದೆ. … Continued

ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು…!

ನವದೆಹಲಿ : ರಾಜ್ಯಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ ಸೋಲಂಕಿ ಉತ್ತರ ಪ್ರದೇಶದ ಬುಲಂದಶಹರದಲ್ಲಿ ರೇಬೀಸ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ, ಬ್ರಿಜೇಶ ಅವರು ಕಾಪಾಡಿದ್ದ ನಾಯಿಮರಿಯೊಂದು ಅವರನ್ನು ಕಚ್ಚಿತ್ತು. ಆದಾಗ್ಯೂ, ಅವರು ಅದನ್ನು ಸಣ್ಣ ಗಾಯವೆಂದು ನಿರ್ಲಕ್ಷ್ಯ ಮಾಡಿದ್ದರು ಮತ್ತು ರೇಬೀಸ್ ಇಂಜೆಕ್ಷನ್ ತೆಗೆದುಕೊಳ್ಳಲಿಲ್ಲ. ಅವರ ಸಾವಿಗೆ ಕೆಲವು ದಿನಗಳ ಮೊದಲು ಚಿತ್ರೀಕರಿಸಲಾದ ಬ್ರಿಜೇಶ … Continued

ಇನ್ನು ಈ ತಳಿಯ ನಾಯಿಗಳನ್ನು ಸಾಕುವಂತಿಲ್ಲ: ಪಿಟ್‌ಬುಲ್‌, ಬುಲ್‌ಡಾಗ್‌ ಸೇರಿದಂತೆ 23 ನಾಯಿ ತಳಿಗಳಿಗೆ ನಿಷೇಧ

ನವದೆಹಲಿ: ಪಿಟ್‌ಬುಲ್‌ಗಳು ಮತ್ತು ಬುಲ್‌ಡಾಗ್‌ಗಳು ಸೇರಿದಂತೆ 23 ಅಪಾಯಕಾರಿ ನಾಯಿ ತಳಿಗಳ ಆಮದು, ಸಂತಾನೋತ್ಪತ್ತಿ ಮತ್ತು ಮಾರಾಟವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ದೇಶದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, ಪಿಟ್‌ಬುಲ್ ಟೆರಿಯರ್, ಅಮೆರಿಕನ್ ಬುಲ್‌ಡಾಗ್, ರೊಟ್‌ವೀಲರ್ ಸೇರಿದಂತೆ ಹಲವಾರು ನಾಯಿ ತಳಿಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಕೇಂದ್ರವು 23 ನಾಯಿ … Continued