ಮದುವೆ ಕೆಲವೇ ಕ್ಷಣಗಳ ಮೊದಲು ವರನನ್ನು ಧಿಕ್ಕರಿಸಿ ಮದುವೆ ಸ್ಥಗಿತಗೊಳಿಸಿದ ವಧು…!

ಬರೇಲಿ: ದಂಪತಿಯ ಜೀವನದ ಅತ್ಯಂತ ಸಂತೋಷದ ದಿನವು ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮದುವೆಯ ವಿಧಿವಿಧಾನಗಳು ಆರಂಭಗೊಳ್ಳುವ ಕೆಲವೇ ಕ್ಷಣಗಳ ಮೊದಲು ವರನನ್ನು ಮದುವೆಯಾಗಲು ವಧಿ ನಿರಾಕರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದಿದೆ ಎಂದು ವರದಿಯಾಗಿದೆ. ವರನು ಭಾರೀ ವರದಕ್ಷಿಣೆಯಾಗಿ ಕಾರು ಮತ್ತು ₹20 ಲಕ್ಷ ನಗದು ಹಣಕ್ಕೆ ಬೇಡಿಕೆ ಇಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. … Continued

ವರದಕ್ಷಿಣೆ ಕಿರುಕುಳಕ್ಕೆ ಸತ್ತಿದ್ದಾಳೆಂದು ನಂಬಲಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪ್ರತ್ಯಕ್ಷ…! ಸಾವಿನ ನಾಟಕ ಪೊಲೀಸರಿಂದ ಬಯಲು

ಗಾಜಿಪುರ/ಗ್ವಾಲಿಯರ್: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಹತ್ಯೆಗೀಡಾಗಿದ್ದಾಳೆ ಎಂದು ಘೋಷಿಸಲಾಗಿದ್ದ ಮಹಿಳೆಯೊಬ್ಬಳು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾಳೆ….! ರುಚಿ ಎಂಬ ಮಹಿಳೆ ತನ್ನ ಪ್ರಿಯಕರನೊಂದಿಗೆ ಆತನ ಪತ್ನಿಯಾಗಿ ವಾಸಿಸುತ್ತಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆಕೆಯ ಅತ್ತೆ-ಮಾವನ ಕುಟುಂಬದ ಆರು ಮಂದಿ ವರದಕ್ಷಿಣೆ ಸಾವು ಮತ್ತು ಸಾಕ್ಷ್ಯ ನಾಶದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರು. ಇದೀಗ, ಪೊಲೀಸ್ ತನಿಖೆಯಿಂದ … Continued

ವರದಕ್ಷಿಣೆ ಕಿರುಕುಳ; ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಶುಕ್ರವಾರ ಉಪನ್ಯಾಸಕಿಯೊಬ್ಬರು ತಮ್ಮ ಮೂರು ವರ್ಷದ ಮಗಳ ಜೊತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಯಶಸ್ವಿ ಸ್ಥಳದಲ್ಲೇ ಸಾವಿಗೀಡಾದರೆ, ಆಕೆಯ ತಾಯಿ ಹಾಗೂ ಉಪನ್ಯಾಸಕಿ ಸಂಜು ಬಿಷ್ಣೋಯ ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವರದಕ್ಷಿಣೆಗಾಗಿ ಪತಿ ಮತ್ತು ಅತ್ತೆ-ಮಾವ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಆತ್ಮಹತ್ಯೆ ಪತ್ರವನ್ನು … Continued

ವರದಕ್ಷಿಣೆಯಾಗಿ ಕಿಡ್ನಿಯನ್ನೇ ನೀಡು ಎಂದು ಸೊಸೆಗೆ ಹೇಳಿದ ಅತ್ತೆ-ಮಾವ…!

ಪಾಟ್ನಾ:  ಬಿಹಾರದ ಮಹಿಳೆಯೊಬ್ಬರಿಗೆ ಬೈಕ್, ನಗದು ಮತ್ತು ಆಭರಣಗಳನ್ನು ವರದಕ್ಷಿಣೆಯಾಗಿ ತರಲು ಸಾಧ್ಯವಾಗದಿದ್ದರೆ ಅವರ ಪತಿಗೆ ಮೂತ್ರಪಿಂಡ ದಾನ ಮಾಡುವಂತೆ ಅವರ ಅತ್ತೆ-ಮಾವಂದಿರು ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಬಿಹಾರದ ಮುಜಫರಪುರದಲ್ಲಿ ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಬೇಡಿಕೆಯಿಟ್ಟ ವಿಚಿತ್ರ ಘಟನೆ ವರದಿಯಾಗಿದೆ. ಈ ಸಂಬಂಧ ಮುಜಫರಪುರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. … Continued

ವರದಕ್ಷಿಣೆಯಾಗಿ ಬಿಎಂಡಬ್ಲ್ಯು ಕಾರ್‌, ಚಿನ್ನ, ಭೂಮಿಯ ಬೇಡಿಕೆ : ಮದುವೆ ರದ್ದು, ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ :  ವರದಕ್ಷಿಣೆ ಬೇಡಿಕೆಯಿಂದ 26 ವರ್ಷದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬುಧವಾರ ಆದೇಶಿಸಿದ್ದಾರೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಬಾಡಿಗೆ ಅಪಾರ್ಟ್ಮೆಂಟ್ … Continued

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಮಹಿಳಾ ಐಪಿಎಸ್‌ ಅಧಿಕಾರಿ ದೂರು

ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್  ಸೇರಿದಂತೆ ಏಳು ಜನರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು … Continued