“ಅವರಿಗೆ ನನ್ನ ಮೇಲೆ ಕೋಪವಿದೆಯೇ ? ಮಮತಾ ಮೇಲೆ ರಾಷ್ಟ್ರಪತಿ ಮುರ್ಮು ಅಸಮಾಧಾನ

ಕೋಲ್ಕತ್ತಾ : ವಿಧಾನಸಭೆ ಚುನಾವಣೆಗೆ ವಾರಗಳ ಮೊದಲು ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಂಪುಟದ ಯಾವುದೇ ಸಚಿವರು ತಮ್ಮನ್ನು ಸ್ವಾಗತಿಸಲು ಹಾಜರಿಲ್ಲದ ಕಾರಣ ಮಮತಾ ಬ್ಯಾನರ್ಜಿ ತಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆಯೇ ಎಂದು ಶನಿವಾರ ಪ್ರಶ್ನಿಸಿದ್ದಾರೆ. ತಾವು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ … Continued

ಕಾರವಾರ : ನೌಕಾಪಡೆಯ ಸಬ್‌ಮರಿನ್‌ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚಾರ

ಕಾರವಾರ: ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದಲ್ಲಿ ನೌಕಾಪಡೆಯ ‘ಐಎನ್ಎಸ್ ವಾಗ್ಶೀರ್’ (INS Vaghsheer) ಸಬ್‌ಮರಿನ್‌ನಲ್ಲಿ (ಜಲಾಂತರ್ಗಾಮಿ) ಸಮುದ್ರದ ಆಳಕ್ಕೆ ಇಳಿಯುವ ಮೂಲಕ ಐತಿಹಾಸಿಕ ಸಾಹಸ ಮೆರೆದಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ನಂತರ ಸಬ್‌ಮರಿನ್‌ನಲ್ಲಿ ಪಯಣಿಸಿದ ಎರಡನೇ ರಾಷ್ಟ್ರಪತಿ ಎಂಬ … Continued

ಇಂದು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿರುವ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ (ಅಕ್ಟೋಬರ್‌ 29) ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. “ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾಗೆ ಬುಧವಾರ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ” ಎಂದು ರಾಷ್ಟ್ರಪತಿ ಭವನ ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ … Continued

ವೀಡಿಯೊ…| “ನಿಮಗೆ ಕನ್ನಡ ಬರುತ್ತದೆಯೇ” ; ರಾಷ್ಟ್ರಪತಿಗಳನ್ನುಕೇಳಿದ ಸಿದ್ಧರಾಮಯ್ಯ: ಅವರು ಕೊಟ್ಟ ಉತ್ತರ ಏನು ಗೊತ್ತೆ ?-ವೀಕ್ಷಿಸಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರಿಗೆ ಸೋಮವಾರ ಭೇಟಿ ನೀಡಿದಾಗ ಅವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹಾಸ್ಯಮಯವಾಗಿ ವಿಚಾರ ವಿನಿಮಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು “ನಿಮಗೆ ಕನ್ನಡ ಬರುತ್ತಾ?” ಎಂದು ಕೇಳಿದರು. ರಾಷ್ಟ್ರಪತಿಗಳು ನಗುತ್ತಾ, ಗೊತ್ತಿಲ್ಲ ಎಂದು ಹೇಳಿದರು.  ಹಾಗೂ ಖಂಡಿತವಾಗಿಯೂ ತಾವು ಭಾಷೆ ಕಲಿಯುವುದಾಗಿ ಹೇಳಿದರು. ಅಖಿಲ ಭಾರತ ವಾಕ್ … Continued

ರಾಷ್ಟ್ರಪತಿ ಮುರ್ಮು ಜನ್ಮದಿನ | ಅವರ ಮುಂದೆಯೇ ಹಾಡು ಹಾಡಿದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳು ; ರಾಷ್ಟ್ರಪತಿಗಳ ಕಣ್ಣಲ್ಲಿ ನೀರು-ವೀಕ್ಷಿಸಿ

ಡೆಹ್ರಾಡೂನ್: ಪ್ರಸ್ತುತ ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 67 ನೇ ಜನ್ಮದಿನಾಚರಣೆಗೆ ಡೆಹ್ರಾಡೂನ್‌ನಲ್ಲಿರುವ ರಾಷ್ಟ್ರೀಯ ದೃಷ್ಟಿ ವಿಕಲಚೇತನರ ಸಬಲೀಕರಣ ಸಂಸ್ಥೆಯ (NIEPVD) ವಿದ್ಯಾರ್ಥಿಗಳು ವಿಶೇಷ ಜನ್ಮದಿನದ ಹಾಡನ್ನು ಪ್ರದರ್ಶಿಸಿದಾಗ ಅವರು ಭಾವುಕರಾದರು. ವಿದ್ಯಾರ್ಥಿಗಳ ಹೃದಯಸ್ಪರ್ಶಿ ಪ್ರದರ್ಶನ ನೋಡುತ್ತ ತಮ್ಮ ಭಾವನೆಗಳನ್ನು ತಡೆದುಕೊಳ್ಳಲು ಕಷ್ಟಪಡುತ್ತಿದ್ದ ರಾಷ್ಟ್ರಪತಿಯವರ ಈ ಭಾವನಾತ್ಮಕ ಗೌರವವು ಅವರ … Continued

ಸಂಸತ್ತಿನಲ್ಲಿ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ: ಎರಡು ದಿನಗಳ ಮ್ಯಾರಥಾನ್ ಚರ್ಚೆಯ ನಂತರ ಈ ವಾರ ಸಂಸತ್ತಿನ ಉಭಯ ಸದನಗಳಿಂದ ಅಂಗೀಕರಿಸಲ್ಪಟ್ಟ ವಕ್ಫ್ (ತಿದ್ದುಪಡಿ) ಮಸೂದೆಯು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದು ಈಗ ಕಾಯ್ದೆಯಾಗಲಿದೆ. ವಕ್ಫ್ ಮಂಡಳಿ ಮತ್ತು ಆಸ್ತಿಗಳ ಕಾರ್ಯನಿರ್ವಹಣೆಯಲ್ಲಿ ಬದಲಾವಣೆ ತರಲು ಪ್ರಯತ್ನಿಸುವ ವಕ್ಫ್ (ತಿದ್ದುಪಡಿ) ಮಸೂದೆಯ ಬಗ್ಗೆ 13 ಗಂಟೆಗಳ ಚರ್ಚೆಯ ನಂತರ … Continued

ವೀಡಿಯೊ..| ಹಿಂದಿ ಸಿನೆಮಾದ ಕುಛ್‌ ಕುಛ್‌ ಹೋತಾ ಹೈ ಹಾಡನ್ನು ವಾದ್ಯ ಸಮೇತ ಹಾಡಿ ಸಂಭ್ರಮಿಸಿದ ಇಂಡೋನೇಷ್ಯಾದ ಅಧಿಕಾರಿಗಳ ನಿಯೋಗ…!

ನವದೆಹಲಿ: ಇಂದು (ಜನವರಿ 26) ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದೆ. ಈ ಬಾರಿ ಗಣರಾಜ್ಯೋತ್ಸವ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋ ಸುಬಿಯಂತೋ(Prabowo Subianto) ಆಗಮಿಸಿದ್ದಾರೆ. ಪ್ರಬೋ ಸುಬಿಯಂತೋ ಮತ್ತು ಅವರ ಜೊತೆಗಿದ್ದ ಅಧಿಕಾರಿಗಳ ನಿಯೋಗಕ್ಕೆ ರಾಷ್ಟ್ರಪತಿ ಭವನದಲ್ಲಿ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳ ತಂಡ ಬಾಲಿವುಡ್‌ನ ಜನಪ್ರಿಯ ಸಿನಿಮಾದ ಹಾಡೊಂದನ್ನು ಹಾಡಿದ್ದು, … Continued

ಖ್ಯಾತ ಆಟಗಾರ್ತಿ ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್‌ ಆಡಿದ ರಾಷ್ಟ್ರಪತಿ ದೌಪದಿ ಮುರ್ಮು- ವೀಡಿಯೊ ವೈರಲ್‌

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಸೌಹಾರ್ದ ಪಂದ್ಯವನ್ನು ಆಡುವ ಮೂಲಕ ಈ ಕ್ರೀಡೆಯ ಮೇಲಿನ ಪ್ರೀತಿಯನ್ನು ಪ್ರದರ್ಶಿಸಿದರು. ರಾಷ್ಟ್ರಪತಿಗಳ ಕಚೇರಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ದ್ರೌಪದಿ ಮುರ್ಮು ಅವರು ಲಿಲಾಕ್ ಬಣ್ಣದ ಸಾಂಪ್ರದಾಯಿಕ ಸಲ್ವಾರ್-ಕಮೀಜ್ ಧರಿಸಿದ್ದು, ಕ್ರೀಡಾ ಬೂಟುಗಳನ್ನು ಹಾಕಿಕೊಂಡಿರುವುದನ್ನು ಕಾಣಬಹುದು. ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ … Continued

ʼತುರ್ತು ಪರಿಸ್ಥಿತಿ ಹೇರಿಕೆʼ ನಮ್ಮ ಸಂವಿಧಾನದ ಮೇಲಿನ ಅತಿದೊಡ್ಡ ನೇರ ದಾಳಿ; ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 1975 ರಲ್ಲಿ ದೇಶದ ಮೇಲೆ ಹೇರಲಾದ ತುರ್ತು ಪರಿಸ್ಥಿತಿಯು ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಗುರುವಾರ ಸಂಸತ್ತಿನ ಜಂಟಿ ಅಧಿವೇಶನದ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಹೊಸ ಲೋಕಸಭೆ ನೂತನ ಸ್ಪೀಕರ್‌ ಅವರನ್ನು ಆಯ್ಕೆ ಮಾಡಿದ ನಂತರ ಇದು ಸಂಸತ್ತಿನಲ್ಲಿ … Continued

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಶುಕ್ರವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ. ನಂತರ ಮಾತನಾಡಿದ ಮೋದಿ, ”ರಾಷ್ಟ್ರಪತಿಗಳು ನನಗೆ ನಿಯೋಜಿತ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಲು ತಿಳಿಸಿದ್ದಾರೆ. ಜೂನ್​ 9ರಂದು ಸಂಜೆ … Continued