ಶಿರಸಿ | ಈಜಲು ತೆರಳಿದ್ದ ಇಬ್ಬರು ನೀರುಪಾಲು

ಶಿರಸಿ :ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹಳ್ಳದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮಾಸ್ತಿಜಡ್ಡಿ ಗ್ರಾಮದ ಮದನ ಗಜಾನನ ನಾಯ್ಕ (೧೬) ಹಾಗೂ ಹೊನ್ನಾವರ ತಾಲೂಕಿನ ಹರ್ಷ ಮಂಜುನಾಥ ನಾಯ್ಕ(೧೯) ಮೃತ ಬಾಲಕರಾಗಿದ್ದು, ಇಬ್ಬರೂ ಮಾಸ್ತಿಜಡ್ಡಿಯಲ್ಲಿರುವ ಸುಮಾರು ೧೫ ಅಡಿ … Continued

ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued

ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ … Continued

ಭಟ್ಕಳದಲ್ಲಿ ದುರಂತ; ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ನೀರು ಪಾಲು

ಕಾರವಾರ : ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ನೀರು ಪಾಲಾದ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ​ಭಟ್ಕಳ ತಾಲೂಕಿನ … Continued

ಭಟ್ಕಳ; ಇಬ್ಬರು ಸಮುದ್ರ ಪಾಲು

ಕಾರವಾರ : ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದ ಇಬ್ಬರು ಯುವಕರು ಆಕಸ್ಮಿಕವಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬುಧವಾರ ಅಪರಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಉತ್ತರ ಪ್ರದೇಶದ ಕಾನ್ಪುರ ಮೂಲದ ಅಫ್ರೋಜ್ (34) ಮತ್ತು ರಿಜ್ವಾನ್ (28) ಎಂದು ಹೇಳಲಾಗಿದೆ. ಮೃತರು ಭಟ್ಕಳದ ಸ್ಥಳೀಯ ಗಾರ್ಮೆಂಟ್ಸ್‌ನಲ್ಲಿ … Continued

ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಚಿಕ್ಕಮಗಳೂರು : ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ … Continued

ಅಂಕೋಲಾ : ವಿಭೂತಿ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ … Continued

ಧಾರವಾಹಿ ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ಸಾವು

ಬಂಗಾಳಿ ಚಿತ್ರರಂಗದ ಜನಪ್ರಿಯ ನಟ ರಾಹುಲ್ ಅರುಣೋದಯ ಬ್ಯಾನರ್ಜಿ (43) ಅವರು ಮಾರ್ಚ್ 29 ರಂದು ಒಡಿಶಾ-ಪಶ್ಚಿಮ ಬಂಗಾಳ ಗಡಿಯ ಬಳಿಯ ದಿಘಾದ ತಲ್ಸಾರಿಯಲ್ಲಿ ದಿಘಾ ಸಮೀಪದ ತಾಲ್ಸರಿ ಬೀಚ್‌ನಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ‘ಭೋಲೆ ಬಾಬಾ ಪಾರ್ ಕರೇಗಾ’ ಎಂಬ ಬಂಗಾಳಿ ಕಿರುತೆರೆ ಸರಣಿಯ ಚಿತ್ರೀಕರಣಕ್ಕಾಗಿ ರಾಹುಲ್ … Continued

ಸುರಪುರ: ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಯಾದಗಿರಿ : ಕೃಷಿ ಹೊಂಡದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ಮುಳುಗಿ ನೀರು ಪಾಲಾದ  ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ಬಾಲಕರನ್ನು ಕಿರಣ (6), ಬಸಮ್ಮ (11), … Continued

ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ರಾಯಚೂರು : ಆಂಧ್ರ ಪ್ರದೇಶದ ಕೊಸಗಿ ಮಂಡಲ ಕಂದಕೂರು ಬಳಿ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಮುಳುಗಿ ನೀರುಪಾಲಾದ ಘಟನೆ ಶುಕ್ರವಾರ(ಮಾ.28) ನಡೆದಿದೆ ಎಂದು ವರದಿಯಾಗಿದೆ. ಕರ್ನೂಲು ಜಿಲ್ಲೆಯ ರಾಜೊಳ್ಳಿಬಂಡಾ ಅಣೆಕಟ್ಟಿನ ಹೊಂದಿಕೊಂಡಿರುವ ಕಂದಕೂರು ಬಳಿ ಈ ದುರ್ಘಟನೆ ನಡೆದಿದ್ದು, ಮೃತರನ್ನುರಾಯಚೂರು ​ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ … Continued