ಧಾರವಾಹಿ ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ಸಾವು

ಬಂಗಾಳಿ ಚಿತ್ರರಂಗದ ಜನಪ್ರಿಯ ನಟ ರಾಹುಲ್ ಅರುಣೋದಯ ಬ್ಯಾನರ್ಜಿ (43) ಅವರು ಮಾರ್ಚ್ 29 ರಂದು ಒಡಿಶಾ-ಪಶ್ಚಿಮ ಬಂಗಾಳ ಗಡಿಯ ಬಳಿಯ ದಿಘಾದ ತಲ್ಸಾರಿಯಲ್ಲಿ ದಿಘಾ ಸಮೀಪದ ತಾಲ್ಸರಿ ಬೀಚ್‌ನಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ‘ಭೋಲೆ ಬಾಬಾ ಪಾರ್ ಕರೇಗಾ’ ಎಂಬ ಬಂಗಾಳಿ ಕಿರುತೆರೆ ಸರಣಿಯ ಚಿತ್ರೀಕರಣಕ್ಕಾಗಿ ರಾಹುಲ್ … Continued

ಸುರಪುರ: ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಯಾದಗಿರಿ : ಕೃಷಿ ಹೊಂಡದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ಮುಳುಗಿ ನೀರು ಪಾಲಾದ  ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ಬಾಲಕರನ್ನು ಕಿರಣ (6), ಬಸಮ್ಮ (11), … Continued

ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ರಾಯಚೂರು : ಆಂಧ್ರ ಪ್ರದೇಶದ ಕೊಸಗಿ ಮಂಡಲ ಕಂದಕೂರು ಬಳಿ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಮುಳುಗಿ ನೀರುಪಾಲಾದ ಘಟನೆ ಶುಕ್ರವಾರ(ಮಾ.28) ನಡೆದಿದೆ ಎಂದು ವರದಿಯಾಗಿದೆ. ಕರ್ನೂಲು ಜಿಲ್ಲೆಯ ರಾಜೊಳ್ಳಿಬಂಡಾ ಅಣೆಕಟ್ಟಿನ ಹೊಂದಿಕೊಂಡಿರುವ ಕಂದಕೂರು ಬಳಿ ಈ ದುರ್ಘಟನೆ ನಡೆದಿದ್ದು, ಮೃತರನ್ನುರಾಯಚೂರು ​ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ … Continued

ಕಾರವಾರ : ಸಮುದ್ರ ಸ್ನಾನ ಮಾಡುವಾಗ ಮುಳುಗಿ ಬಾಲಕ ಸಾವು

ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಗಾಂವಗೇರಿಯ ಯಶ್ (17) ಎಂಬಾತ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಶಿವರಾತ್ರಿ ಹಿನ್ನೆಲೆಯನ್ನು ಮಾಜಾಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರುದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು … Continued

ಉಡುಪಿ : ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಇಬ್ಬರು ಸಾವು

ಉಡುಪಿ : ವಿಹಾರಕ್ಕೆಂದು ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ದೋಣಿ ಸಮುದ್ರದಲ್ಲಿ ಮಗುಚಿ ಇಬ್ಬರು ಸಾವಿಗೀಡಾದ ಘಟನೆ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಂಕರಪ್ಪ (22) ಸಿಂಧು ( 23) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಬೆಂಗ್ರೆ ಬಳಿಯ ಡೆಲ್ಟಾ ಬೀಚ್ ನಿಂದ ಪ್ರವಾಸಿ ಬೋಟ್ ನಲ್ಲಿ … Continued

ರಾಮದುರ್ಗ: ಕಾಲುವೆಗೆ ಈಜಲು ಇಳಿದಿದ್ದ ಇಬ್ಬರು ಬಾಲಕರು ಸಾವು

ಬೆಳಗಾವಿ: ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಣಮಂತ  ಹಗೇದ (10) ಹಾಗೂ ಬಸವರಾಜ ಸೋಮಣ್ಣವರ (10) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ತಂದೆಯ ಜೊತೆ ಕುರಿ ಕಾಯಲು ಹೋಗಿದ್ದ ಸಂದರ್ಭದಲ್ಲಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಎಷ್ಟುಹೊತ್ತು ಕಳೆದರೂ ಮಕ್ಕಳು ಬಾರದಿದ್ದಾಗ … Continued

ಹೊನ್ನಾವರ : ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ಸಾವು

ಹೊನ್ನಾವರ : ಅರಬ್ಬೀ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿದ್ಯಾರ್ಥಿಗಳಾದ ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ 6:30ರ ಸುಮಾರಿಗೆ ತಮ್ಮ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ … Continued

ಭಟ್ಕಳ : ಕೆರೆಗೆ ಮೀನು ಹಿಡಿಯಲು ಹೋಗಿದ್ದ ಬಾಲಕ ಕಾಲುಜಾರಿ ಬಿದ್ದು ಸಾವು

ಭಟ್ಕಳ: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ 15 ವರ್ಷದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಆಸರಕೇರಿ ಜಂಬುರಮಠ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಶಶಿಧರ ಮೊಗೇರ ಎಂದು ಗುರುತಿಸಲಾಗಿದೆ. ಭಟ್ಕಳ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಲಾ ಸ್ನೇಹಿತರೊಂದಿಗೆ ಮಧ್ಯಾಹ್ನದ ಸುಮಾರಿಗೆ ಕೊಳದ ಬಳಿ ಮೀನು … Continued

ಸಿಂಧುದುರ್ಗದಲ್ಲಿ ದುರಂತ: ಪಿಕ್ನಿಕ್ ಗೆ ತೆರಳಿದ್ದ ಬೆಳಗಾವಿ ಜಿಲ್ಲೆ ಮೂವರ ದುರ್ಮರಣ, ನಾಲ್ವರು ನಾಪತ್ತೆ

 ಬೆಳಗಾವಿ : ಮಹಾರಾಷ್ಟ್ರದ ಸಿಂಧುದುರ್ಗಕ್ಕೆ ತೆರಳಿದ್ದ ಖಾನಾಪುರದ ಎಂಟು ಜನರ ತಂಡದಲ್ಲಿ ಮೂವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಾರಾಷ್ಟ್ರದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಘೋರ ದುರಂತ ಸಂಭವಿಸಿದೆ. ಎಂಟು ಜನರಿದ್ದ ಕುಟುಂಬ ಸದಸ್ಯರು ಅರಬ್ಬೀ ಸಮುದ್ರಕ್ಕೆ ಹೋದಾಗ ಪಿಕ್ನಿಕ್ ಮಾರಕವಾಗಿ ಪರಿಣಮಿಸಿದೆ. ಈ ಕುಟುಂಬದ ಮೂವರು ಸದಸ್ಯರು ನೀರಿನಲ್ಲಿ ಮುಳುಗಿ … Continued

ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಬಾಲಕ ಸಮುದ್ರ ಪಾಲು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಕುಟುಂಬವೊಂದು ಸಮುದ್ರದಲ್ಲಿ ಇಳಿದಿದ್ದಾಗ ಬಾಲಕನೊಬ್ಬ ಕಡಲ ಅಲೆಗೆ ಸಿಲುಕಿ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಬಿದರಳ್ಳಿ ನಿವಾಸಿ ಕೃತಿಕ್ (8), ತಮ್ಮ ಕುಟುಂಬ ಸಮೇತ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ … Continued