ವೀಡಿಯೊ..| ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ದುಬೈ: ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ದುಬೈ ಮಾಧ್ಯಮ ಕಚೇರಿ (DMO) ಶನಿವಾರ ತಿಳಿಸಿದೆ. ಶುಕ್ರವಾರ ರಾತ್ರಿ ಬೆಂಕಿ ಪ್ರಾರಂಭವಾದ ನಂತರ ಮರೀನಾ ಪಿನ್ನಾಕಲ್‌ನ 764 ಅಪಾರ್ಟ್‌ಮೆಂಟ್‌ಗಳ ಎಲ್ಲಾ 3,820 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ದುಬೈ ನಾಗರಿಕ ರಕ್ಷಣಾ ತಂಡಗಳು ಆರು ಗಂಟೆಗಳ ಕಾಲ ಅವಿಶ್ರಾಂತವಾಗಿ ಕೆಲಸ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ಚಾಂಪಿಯನ್ಸ್‌ ಟ್ರೋಫಿ ಭಾರತ-ನ್ಯೂಜಿಲೆಂಡ್ ಫೈನಲ್‌ ; 5,000 ಕೋಟಿ ರೂ. ಬೆಟ್ಟಿಂಗ್‌, ಭೂಗತ ಜಗತ್ತಿನೊಂದಿಗೆ ನಂಟು

ನವದೆಹಲಿ: ಭಾನುವಾರ ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯಕ್ಕೆ 5,000 ಕೋಟಿ ರೂಪಾಯಿಗಳ ಬೆಟ್ಟಿಂಗ್ ಕಟ್ಟಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಹೇಳಿದೆ. ಭಾರತವು ಅಂತಾರಾಷ್ಟ್ರೀಯ ಬುಕ್ಕಿಗಳ ನೆಚ್ಚಿನ ತಂಡವಾಗಿದೆ, ಅನೇಕ ಬುಕ್ಕಿಗಳು ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಪ್ರತಿ ದೊಡ್ಡ ಪಂದ್ಯದ ಸಮಯದಲ್ಲಿ ದುಬೈನಲ್ಲಿ ದೊಡ್ಡ ಬುಕ್ಕಿಗಳು … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ | 15 ದಿನದಲ್ಲಿ ದುಬೈಗೆ 4 ಸಲ ಭೇಟಿ ; ಅದೇ ಬಟ್ಟೆ ಧರಿಸಿದ್ದ ನಟಿ ; ರನ್ಯಾ ರಾವ್ ಸಿಕ್ಕಿಬಿದ್ದಿದ್ದು ಹೇಗೆ…?

 ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 14.8 ಕೆಜಿ ಚಿನ್ನಾಭರಣವನ್ನು ಪತ್ತೆ ಮಾಡಿದ ನಂತರ ನಟಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಯ ಮಲ ಪುತ್ರಿ ರನ್ಯಾ ರಾವ್ ಅವಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಮಾಣದ ಚಿನ್ನಾಭರಣದ ಪ್ರಮುಖ ಕಳ್ಳಸಾಗಣೆ ದಂಧೆಯನ್ನು ಡಿಆರ್‌ಐ ಭೇದಿಸಿದ್ದಾರೆ. … Continued

ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued

ವೀಡಿಯೊ.. | ಖ್ಯಾತ ನಟ ಅಜಿತ್ 180 ಕಿಮೀ ವೇಗದಲ್ಲಿ ಚಲಾಯಿಸುತ್ತಿದ್ದ ರೇಸ್‌ ಕಾರು ಅಪಘಾತ…ಕೂದಲೆಳೆ ಅಂತರದಲ್ಲಿ ಪಾರು…

ಮುಂಬರುವ 24H ದುಬೈ 2025 ಕಾರ್‌ ಗ್ರ್ಯಾಂಡ್‌ ಪ್ರಿಕ್ಸ್‌ ರೇಸ್‌ನ ಅಭ್ಯಾಸದ ವೇಳೆ ದಕ್ಷಿಣ ಭಾರತದ ಖ್ಯಾತ ನಟ (ಬಹುತೇಕ ತಮಿಳು) ಅಜಿತ ಅವರ ಕಾರು ಅಪಘಾತಕ್ಕೀಡಾಗಿದೆ. ವೀಡಿಯೊದಲ್ಲಿ ವೇಗವಾಗಿ ಬರುತ್ತಿದ್ದ ಅಜಿತ ಅವರ ಕಾರು ನಿಲುಗಡೆಗೆ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ನಟ ಅಜಿತ ಅವರು ಅಪಾಯದಿಂದ ಪಾರಾಗಿದ್ದಾರೆ. 180 ಕಿಮೀ … Continued

ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 | 8 ಕ್ರಿಕೆಟ್‌ ತಂಡಗಳು ಭಾಗಿ ; ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ ಪಂದ್ಯ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ (ಡಿಸೆಂಬರ್ 24) ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತಕ್ಕೆ ಅವಕಾಶ ಕಲ್ಪಿಸಲು ಪಿಸಿಬಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಪಾಕಿಸ್ತಾನವು ಪಂದ್ಯಾವಳಿಯನ್ನು ಆಯೋಜಿಸುತ್ತದೆ ಎಂದು ಐಸಿಸಿ (ICC) ಪ್ರಕಟಿಸಿದ ನಂತರ ಪಂದ್ಯಗಳು ನಡೆಯುವ ಸ್ಥಳಗಳು ಸೇರಿದಂತೆ ಎಲ್ಲಾ ತಂಡಗಳ ವೇಳಾಪಟ್ಟಿಯನ್ನು … Continued

₹ 13 ಕೋಟಿ ಮೌಲ್ಯದ ಎರಡು ಐಷಾರಾಮಿ ವಾಚ್‌ ಕಳ್ಳಸಾಗಣೆ ಮಾಡುತ್ತಿದ್ದ ದಂಪತಿ ಸೆರೆ

ಅಹಮದಾಬಾದ್: ದುಬೈನಿಂದ ಶುಕ್ರವಾರ ಸುಮಾರು ₹ 13 ಕೋಟಿ ಮೌಲ್ಯದ ಎರಡು ದುಬಾರಿ ವಾಚ್‌ಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ರಾಜಸ್ಥಾನದ ದಂಪತಿಯನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ದುಬೈನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಆಗಮಿಸಿದ ಪುರುಷ ಮತ್ತು ಮಹಿಳೆಯಿಂದ … Continued

ಇನ್‌ಸ್ಟಾಗ್ರಾಂನಲ್ಲಿ ಅರಳಿದ ಪ್ರೀತಿ…ಫೋನ್‌ ನಲ್ಲಿ ಮದುವೆ ನಿಶ್ಚಯ…ದಿಬ್ಬಣ ಸಮೇತ ಮದುವೆ ಸ್ಥಳಕ್ಕೆ ಹೋದ ಮದುಮಗ…ವಧು ನಾಪತ್ತೆ….!

ಚಂಡೀಗಡ: ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬ ಮಹಿಳೆಯನ್ನು ಮದುವೆಯಾಗಲು ಜಲಂಧರ ಮೂಲದ ದೀಪಕಕುಮಾರ(24) ದುಬೈನಿಂದ ಕಳೆದ ತಿಂಗಳು ಭಾರತಕ್ಕೆ ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಲಾಗಿದೆ ಎಂದು ಹೇಳಿದ ಕಲ್ಯಾಣ ಮಂಟಪಕ್ಕೆ ಮದುಮಗ ದಿಬ್ಬಣದೊಂದಿಗೆ ಬಂದರೆ ಅಲ್ಲಿ ಆ ಹೆಸರಿನ ಕಲ್ಯಾಣ ಮಂಟಪವೇ … Continued

ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಆಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ; ಪ್ರಕಾಶ ಅಂಬೇಡ್ಕರ್ ಸ್ಫೋಟಕ ಹೇಳಿಕೆ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್) ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ದಾವೂದ್ ಇಬ್ರಾಹಿಂ ಅವರನ್ನು ದುಬೈನಲ್ಲಿ ಭೇಟಿಯಾಗಿದ್ದರು ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ ಅಂಬೇಡ್ಕರ್ ಶುಕ್ರವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶರದ್ ಪವಾರ್ ಅವರು ಮುಖ್ಯಮಂತ್ರಿಯಾಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂ ಅವರನ್ನು ಭೇಟಿ ಮಾಡಲು … Continued