ಮತದಾರರ ಪಟ್ಟಿಯಿಂದ ಹೆಸರು ತೆಗೆದ ಮಾತ್ರಕ್ಕೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ವ್ಯಕ್ತಿಯ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೊಮ್ಮೆ ಮೌಖಿಕವಾಗಿ ಸ್ಪಷ್ಟಪಡಿಸಿದೆ. ಬಿಹಾರ ಎಸ್‌ಐಆರ್ ಪ್ರಕರಣದಲ್ಲಿ ಈಗಾಗಲೇ ನೀಡಿದ್ದ ತೀರ್ಪಿನಲ್ಲಿಯೇ ಚುನಾವಣಾ ಆಯೋಗ (ECI) ಪೌರತ್ವ ನಿರ್ಧರಿಸುವ ಅಂತಿಮ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು … Continued

ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ 3ನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR)

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶಕುಮಾರ (Gyanesh Kumar) ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು … Continued

ಎಲ್ಲ ಮಾಹಿತಿಯನ್ನೂ 2 ವರ್ಷಗಳ ಹಿಂದೆಯೇ ನೀಡಲಾಗಿದೆ : ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಉತ್ತರ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗುರುವಾರ ಮಾಡಿದ ಮತದಾರರ ಪಟ್ಟಿ ಅಳಿಸುವಿಕೆ ಆರೋಪಗಳಿಗೆ ಗುರುವಾರ ಪ್ರತಿಕ್ರಿಯಿಸಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ರಾಹುಲ್ ಗಾಂಧಿ ಹೇಳಿದ ಅಳಿಸುವಿಕೆಯ ಮಾಹಿತಿಯನ್ನು ಚುನಾವಣಾ ಆಯೋಗವು ಎರಡು ವರ್ಷಗಳ ಹಿಂದೆಯೇ ರಾಜ್ಯ ಸಿಐಡಿಗೆ ನೀಡಿದೆ ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿಗೆ ಅಗತ್ಯವಿರುವ ಮಾಹಿತಿಯನ್ನು ಕರ್ನಾಟಕ ಸಿಇಒ ಎರಡು ವರ್ಷಗಳ … Continued

ಬಿಹಾರ ಮತದಾರರ ಪಟ್ಟಿಯಿಂದ ತೆಗೆಯಲಿರುವ 65 ಲಕ್ಷ ಮಂದಿ ವಿವರ ಪ್ರಕಟಿಸಿ, ಕಾರಣ ತಿಳಿಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ

ನವದೆಹಲಿ: ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಅಭಿಯಾನದ ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾದ ಸುಮಾರು 65 ಲಕ್ಷ ಮತದಾರರ ಜಿಲ್ಲಾವಾರು ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಆಗಸ್ಟ್ 14) ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಾಗೆಯೇ ಅವರನ್ನು ಮತದಾರರ ಪಟ್ಟಿಯಿಂದ ತೆಗೆದು … Continued

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ; ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತಗಳ್ಳತನದ ಆರೋಪದ ಮೇಲೆ ಚುನಾವಣಾ ಆಯೋಗದ (ಇಸಿ) ಮೇಲೆ ನಿರಂತರ ದಾಳಿ ನಡೆಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಲೋಕಸಭಾ ಚುನಾವಣೆಗಳನ್ನು ವಂಚಿಸಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ್ದಾರೆ. ಗುರವಾರ (ಆಗಸ್ಟ್‌ ೭) ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ಕರ್ನಾಟಕದ … Continued

ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

ನವದೆಹಲಿ : ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ದೇಶಾದ್ಯಂತ ನಗದು, ಮದ್ಯ, ಡ್ರಗ್ಸ್‌, ಉಚಿತ ಉಡುಗೊರೆ ಸೇರಿದಂತೆ 8,889 ಕೋಟಿ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದೆ. ಮಾರ್ಚ್‌ 1 ರಿಂದ ಇದುವರೆಗೆ ವಶಕ್ಕೆ ಪಡೆಯಲಾದ ವಸ್ತುಗಳ ಒಟ್ಟು ವಿವರವನ್ನು ನೀಡಿದ ಚುನಾವಣಾ ಆಯೋಗ, 75 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಬೃಹತ್‌ … Continued

ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಚೆನ್ನೈ: ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದರೂ, ನೇರವಾಗಿ ನರೇಂದ್ರ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ಲೋಕಸಭೆ ಚುನಾವಣೆ 2024: ಮೊದಲ ಹಂತದ ಮತದಾನಕ್ಕೆ ಮುನ್ನವೇ 2019ರ ಚುನಾವಣೆಗಿಂತ ಹೆಚ್ಚು ಮೌಲ್ಯದ ಸ್ವತ್ತು ವಶಕ್ಕೆ ಪಡೆದ ಚುನಾವಣಾ ಆಯೋಗ; ಎಷ್ಟು ಗೊತ್ತಾ..?

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಈವರೆಗೆ ದೇಶಾದ್ಯಂತ ದಾಖಲೆ ಇಲ್ಲದೆ ಸಾಗುತ್ತಿದ್ದ 4,650 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ಭದ್ರತಾ ಏಜೆನ್ಸಿಗಳು ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ … Continued

ಸಮುದ್ರದೊಳಗೆ 60 ಅಡಿ ಆಳದ ನೀರಿನಲ್ಲಿ ಮತದಾನ ಜಾಗೃತಿ ಅಭಿಯಾನ | ವೀಕ್ಷಿಸಿ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಭಾರತೀಯ ಚುನಾವಣಾ ಆಯೋಗವುಮತದಾನ ಜಾಗೃತಿಗೆ ಎಲ್ಲ ಪ್ರಯತ್ನವನ್ನೂ ಮಾಡುತ್ತಿದೆ. ನೀರೊಳಗಿನ ಮತದಾನ ಜಾಗೃತಿ ಮಾಡುವ ಮೂಲಕ ಚುನಾವಣಾ ಆಯೋಗವು ಇತ್ತೀಚೆಗೆ ಒಂದು ವಿಶಿಷ್ಟ ಉಪಕ್ರಮವನ್ನು ಕೈಗೊಂಡಿದೆ. ಅಭಿಯಾನದ ಭಾಗವಾಗಿ, ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ವಿದ್ಯಮಾನವಾದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಮಹತ್ವವನ್ನು ಎತ್ತಿ ಹಿಡಿಯಲು ನುರಿತ ಸ್ಕೂಬಾ ಡೈವರ್‌ಗಳ ಗುಂಪು … Continued