ಗೋವಾ ಭೂ ಕಬಳಿಕೆ-ಹಣ ಅಕ್ರಮ ವರ್ಗಾವಣೆ ಪ್ರಕರಣ; ಆರೋಪಿಯ ಕಾರವಾರದ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ : ಗೋವಾದ ಬಹುಕೋಟಿ ರೂಪಾಯಿ ಮೌಲ್ಯದ ಭೂ ಕಬಳಿಕೆ ಹಾಗೂ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕಾರವಾರದ ಕೊಡಿಬಾಗ್‌ನಲ್ಲಿರುವ ಸುಲೈಮಾನ್ ಖಾನ್ ಸಿದ್ದೀಕ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಬಾಗ್‌ನ ಮಿಡ್‌ಮ್ಯಾಕ್ ಆರ್ಕಿಡ್ ಅಪಾರ್ಟ್‌ಮೆಂಟ್‌ನಲ್ಲಿರುವ ಸಿದ್ದೀಕ್ ಅವರ ಮನೆಗೆ ಭೇಟಿ ನೀಡಿದ … Continued

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ : 21 ಕಡೆ ಇ.ಡಿ. ದಾಳಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ  ವಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಮನೆ ಸೇರಿದಂತೆ 21 ಕಡೆಗಳಲ್ಲಿ ಬೆಂಗಳೂರು ವಲಯದ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಇಂದು, ಮಂಗಳವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. .ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ … Continued

ಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ

 ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್‌ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು … Continued

ಅಬಕಾರಿ ಹೆಚ್ಚುವರಿ ಆಯುಕ್ತ-ಸಚಿವ ಸತೀಶ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ … Continued

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ. ದಾಳಿ

ತಿರುವನಂತಪುರಂ/ಹೊಸದೆಹಲಿ: ಕೇರಳ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (PMLA) ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರಂ ನಿವಾಸ ಸೇರಿದಂತೆ ಕೇರಳದ ಒಟ್ಟು 12 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ರಾಜಧಾನಿ ತಿರುವನಂತಪುರಂನಲ್ಲಿರುವ ವಿಜಯನ್ ಅವರ ಬಾಡಿಗೆ ಮನೆ ಹಾಗೂ … Continued

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಇ.ಡಿ. ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು,  ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ಬಾರ್‌ … Continued

ನ್ಯೂಸ್‌ಕ್ಲಿಕ್, ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ. ದಂಡ ವಿಧಿಸಿದ ಇಡಿ

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಗಾಗಿ ಸುದ್ದಿ ಜಾಲತಾಣ ‘ನ್ಯೂಸ್‌ಕ್ಲಿಕ್’ (NewsClick) ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ED) ಸೋಮವಾರ 184 ಕೋಟಿ ರೂಪಾಯಿ ದಂಡ ವಿಧಿಸಿದೆ. ತನಿಖಾ ಸಂಸ್ಥೆಯ ಆದೇಶದ ಪ್ರಕಾರ, ಪೋರ್ಟಲ್‌ನ ಮಾಲೀಕತ್ವ ಹೊಂದಿರುವ ‘ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ … Continued

ಅಕ್ರಮ ಆನ್‌ಲೈನ್ ಬೆಟ್ಟಿಂಗ್ : ಶಾಸಕ ವೀರೇಂದ್ರ ಪಪ್ಪಿ, ಸಹಚರರ 177 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು : ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರನ್ನು ಒಳಗೊಂಡ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED)ವು 177.3 ಕೋಟಿ (ಅಂದಾಜು)ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಇದುವರೆಗೂ 320 ಕೋಟಿ ರೂ. ಆಸ್ತಿ ವಶಪಡಿಸಿಕೊಂಡಂತಾಗಿದೆ. ಮುಟ್ಟುಗೋಲು ಹಾಕಿಕೊಳ್ಳಲಾದ … Continued

ಸಿಎಂ ಮಮತಾ ಬ್ಯಾನರ್ಜಿಯಿಂದ ತನಿಖೆಗೆ ‘ಅಡ್ಡಿ’ ; ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ಕೋಲ್ಕತ್ತಾ: 2020ರ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಗುರುವಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ. ಗುರುವಾರ ಬೆಳಿಗ್ಗೆ ಐ-ಪ್ಯಾಕ್ (I-PAC) ಸಂಸ್ಥೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡಿದ್ದಾರೆ ಎಂದು ಇಡಿ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ ; ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಜಾರಿ ನಿರ್ದೇಶನಾಲಯ (ED) ಈಗ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಈ ಅರ್ಜಿಯು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಲೈವ್‌ … Continued