ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಶಿಕ್ಷಕರು…!

ರಾಮನಗರ: ಶಾಲೆಯ ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ. ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ … Continued

ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶವು ಮೇ 9ರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 … Continued

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ..?

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬೇಗನೆ ಪ್ರಕಟವಾಗುವ ಸಾಧ್ಯತೆ ಇದೆ. ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏಪ್ರಿಲ್‌ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ … Continued

ಶಾಲೆಗಳಲ್ಲಿ ‘ಭಗವದ್ಗೀತೆ’ ಬೋಧನೆ ಪರಿಣಾಮಕಾರಿ ಅನುಷ್ಠಾನ : ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಗಾಂಧಿನಗರ : ಶಾಲೆಗಳಲ್ಲಿ ಭಗವದ್ಗೀತೆ ಕಲಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರದ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯು ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಆಮ್ ಆದ್ಮಿ ಪಕ್ಷವು (ಎಎಪಿ) ನಿರ್ಣಯವನ್ನು ಸ್ವಾಗತಿಸಿ ಅದಕ್ಕೆ ತನ್ನ ಬೆಂಬಲವನ್ನು ನೀಡಿದರೆ, ಕಾಂಗ್ರೆಸ್ ಸದಸ್ಯರು ಆರಂಭದಲ್ಲಿ ಪ್ರತಿಭಟನೆ ಮಾಡಿದರು. … Continued

ಎಂಫಿಲ್ ಮಾನ್ಯತೆ ಪಡೆದ ಪದವಿಯಲ್ಲ : ವಿದ್ಯಾರ್ಥಿಗಳಿಗೆ ಎಚ್ಚರಿಸಿದ ಯುಜಿಸಿ

ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಮಾಸ್ಟರ್ ಆಫ್ ಫಿಲಾಸಫಿ ಪ್ರೋಗ್ರಾಂಗೆ ದಾಖಲಾಗುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಆಯೋಗವು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಅದನ್ನು ವಿಶ್ವವಿದ್ಯಾಲಯದ ಮಂಡಳಿ ರದ್ದುಗೊಳಿಸಿದ್ದರೂ ಸಹ ಕೆಲವು ವಿಶ್ವವಿದ್ಯಾನಿಲಯಗಳು ಕೋರ್ಸ್‌ಗೆ ಹೊಸ ಅರ್ಜಿಗಳನ್ನು ಸ್ವೀಕರಿಸುತ್ತಿವೆ. ಈ ಹಿಂದೆ, ವಿಶ್ವವಿದ್ಯಾಲಯಗಳು ಇನ್ನು ಮುಂದೆ ಎಂಫಿಲ್ ಪದವಿಗಳನ್ನು ನೀಡುವುದಿಲ್ಲ … Continued

ಕರ್ನಾಟಕ ಬಜೆಟ್‌ 2022-23 : 15 ಸಾವಿರ ಶಿಕ್ಷಕರು, 27 ಸಾವಿರ ಅತಿಥಿ ಶಿಕ್ಷಕರ ನೇಮಕ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯ್ತಿ ಬಸ್‌ ಪಾಸ್‌ ಘೋಷಣೆ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಓತ್ತು ನೀಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕ ಆಗುವ ವರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು … Continued

ಹಿಜಾಬ್ – ಕೇಸರಿ ಶಾಲು ವಿವಾದ: ಪರೀಕ್ಷೆ ತಪ್ಪಿಸಿಕೊಂಡರೆ ಬೇರೆ ಅವಕಾಶವಿಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂಇದು ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ಶಾಲು ತೆಗೆದು ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಅವರಿಗೆ … Continued