ಹಿಜಾಬ್-ಕೇಸರಿ ಶಾಲು ಶಾಲಾ-ಕಾಲೇಜುಗಳಿಗೆ ತರುವುದು ಬೇಡ, ಅದಕ್ಕಿಂತ ಶಿಕ್ಷಣ ದೊಡ್ಡದು ಎಂದ ಮಾಜಿ ಸಚಿವ ವಿಶ್ವನಾಥ

ಮೈಸೂರು: ಹಿಜಾಬ್-ಕೇಸರಿ ಶಾಲು ಧರಿಸುವ ವಿಚಾರದಲ್ಲಿ ಕಲ್ಲು ತೂರಿ ಗಲಾಟೆ ಮಾಡಿದವರನ್ನು ಪತ್ತೆ ಹಚ್ಚಿ ಬಂಧಿಸುವುದನ್ನು ಬಿಟ್ಟು ಶಾಲಾ-ಕಾಲೇಜುಗಳಿಗೆ ರಜೆ ಕೊಟ್ಟಿದ್ದು ತಪ್ಪು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. … Continued