ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಪ್ರಲ್ಹಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನೀಟ್‌ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದ್ದು, ಸದ್ಯ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ಪ್ರಲ್ಹಾದ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ … Continued

ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಹಿಜಾಬ್ – ಕೇಸರಿ ಶಾಲು ವಿವಾದ: ಪರೀಕ್ಷೆ ತಪ್ಪಿಸಿಕೊಂಡರೆ ಬೇರೆ ಅವಕಾಶವಿಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂಇದು ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ಶಾಲು ತೆಗೆದು ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಅವರಿಗೆ … Continued

ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ನಾಗೇಶ

ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುರಾಜ್ಯದಲ್ಲಿ ಒಂದು ವೇಳೆ ಕೋವಿಡ್ ಸೋಂಕು ಹೆಚ್ಚಾದರೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರದ … Continued

ಶುಲ್ಕ ಕಟ್ಟಲು ಒತ್ತಡ ಹಾಕಿದ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು: ಖಾಸಗಿ ಶಾಲೆಗಳಿಂದ ಶುಲ್ಕ ಕಟ್ಟಲು ಪೋಷಕರಿಗೆ ಒತ್ತಡ ಮತ್ತು ಕೆಲ ಶಾಲೆಗಳಿಂದ ಫೀಸ್ ಕಟ್ಟಲು ಲೋನ್ ಕೊಡಿಸುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಬಂದ ನಂತರ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಸೂಚನೆ ನೀಡಿದ್ದಾರೆ. ಕಳೆದ ಕೆಲದಿನಗಳಿಂದ ಖಾಸಗಿ … Continued

ಫೆ.20ರ ವರೆಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ದಾಖಲಾತಿಗೆ ಸೂಚನೆ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆ.20ರ ವರೆಗೆ ವಿಸ್ತರಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ … Continued