ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದ್ದಾರೆ. ಶಮಾನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು … Continued

ಪಶ್ಚಿಮ ಘಟ್ಟದಲ್ಲಿ ʼಭೂ ಪರಿವರ್ತನೆʼಗೆ ತಾತ್ಕಾಲಿಕ ತಡೆ

ಬೆಂಗಳೂರು: ರಾಜ್ಯದ ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಭೂ ಉಪಯೋಗದ ಕುರಿತು ನೂತನವಾಗಿ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆಯ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ … Continued

ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ ; ಇಂದಿನಿಂದ (ಆ.5) ಕಾರ್ಯಾಚರಣೆ ; ಮೊದಲು ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ತೆರವು

ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದ (ಆಗಸ್ಟ್‌ 5) ಒತ್ತುವರಿ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ. ಈ ಬಗ್ಗೆ ಪ್ರಕಣೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮೊದಲು … Continued