ವಿಮಾನ ಹಾರಿಸಲು ನಿರಾಕರಿಸಿದ ಪೈಲಟ್…45 ನಿಮಿಷ ಕಾಯ್ದ ಮಹಾರಾಷ್ಟ್ರ ಡಿಸಿಎಂ ; ನಂತರ ಸಂಭವಿಸಿತು ಜೀವ ಉಳಿಸುವ ಟ್ವಿಸ್ಟ್‌…!

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನಿಗದಿತ ಸಮಯಕ್ಕಿಂತ ತಡವಾಗಿ ತಲುಪಿದ ನಂತರ ಜಲಗಾಂವ್ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು. ಅವರು ಶುಕ್ರವಾರ ರಾತ್ರಿ 9:15 ಕ್ಕೆ ವಿಮಾನ ನಿಲ್ದಾಣ ತಲುಪಿದರು, ಆದರೆ ಪೈಲಟ್ ವಿಮಾನ ಟೇಕ್ ಆಫ್ ಮಾಡಲು ನಿರಾಕರಿಸಿದರು. ಶಿಂಧೆ ಅವರ ವಿಳಂಬ ಉಲ್ಲೇಖಿಸಿ, ಇದು ತಮ್ಮ … Continued

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಡಿಸಿಎಂ ಏಕನಾಥ ಶಿಂಧೆಯನ್ನು ದ್ರೋಹಿ ಎಂದು ಕರೆದ ಕುನಾಲ್‌ ಕಾಮ್ರಾ ; ಕಾರ್ಯಕ್ರಮ ನಡೆದ ಸ್ಥಳ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಪಕ್ಷ ಬದಲಿಸಿದ್ದಕ್ಕಾಗಿ ಹಾಸ್ಯನಟ ಕುನಾಲ್ ಕಾಮ್ರಾ ಅವರನ್ನು ಗೇಲಿ ಮಾಡಿದ ವೀಡಿಯೊ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿಂಧೆ ಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗ ಅವರು ಈಗ ಏಕನಾಥ ಶಿಂಧೆ … Continued

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿಯ 19, ಶಿವಸೇನೆಯ 11, ಎನ್‌ಸಿಪಿಯ 9 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಂಬೈ : ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಭಾನುವಾರ ನಡೆದಿದ್ದು, ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್) 39 ಸಚಿವರು ಭಾನುವಾರ ನಾಗ್ಪುರದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯ 19, ಶಿಂಧೆ ಸೇನೆಯ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ … Continued

ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued

ಮಹಾರಾಷ್ಟ್ರ | ಗುರುವಾರ ದೇವೇಂದ್ರ ಫಡ್ನವೀಸ್‌, ಇಬ್ಬರು ಡಿಸಿಎಂಗಳ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದ (Maharashtra) ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಶಿವಸೇನೆ ನಾಯಕ ಏಕನಾಥ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿಜೆಪಿ, ಶಿವಸೇನೆ ಶಿಂಧೆ ಬಣ ಮತ್ತು ಎನ್‌ಸಿಪಿ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued

ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued