ಬೆಳಗಾವಿ ಮಹಾನಗರ ಪಾಲಿಕೆ : ಮಂಗೇಶ ನೂತನ ಮೇಯರ್‌, ವಾಣಿ ಜೋಶಿ ಉಪಮೇಯರ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮಂಗೇಶ ಪವಾರ್ ಮತ್ತು ಉಪಮೇಯರ್ ವಾಣಿ ಜೋಶಿ ಆಯ್ಕೆಯಾಗಿದ್ದಾರೆ. ಮಹಾಪೌರ ಸ್ಥಾನ ಸಾಮಾನ್ಯ ಹಾಗೂ ಉಪಮಹಾಪೌರ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮಹಾಪೌರರಾಗಿ ಆಯ್ಕೆಯಾದ ಮಂಗೇಶ ಪವಾರ್ 41ನೇ ವಾರ್ಡಿನ ಸದಸ್ಯರು ಹಾಗೂ ಮರಾಠಿ ಭಾಷಿಕರು. ಉಪಮಹಾಪೌರರಾಗಿ ಆಯ್ಕೆಯಾದ ಕನ್ನಡ ಭಾಷಿಕ ವಾಣಿ ವಿಲಾಸ ಜೋಶಿ 43ನೇ … Continued

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued

ದೆಹಲಿ ಚುನಾವಣೆ ಫಲಿತಾಂಶ | ಆರಂಭಿಕ ಟ್ರೆಂಡ್‌ ; ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್‌ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್‌ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ. ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ … Continued

ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆ

ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees) 2024-2029ನೇ ಅವಧಿಯ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಶುಕ್ರವಾರ ಚುನಾವಾಣೆ ನಡೆದಿದ್ದು, ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ (CS Shadakshari) ಅವರು ಅವರು ಎರಡನೇ ಬಾರಿ ಹಾಗೂ ಖಜಾಂಚಿಯಾಗಿ ಶಿವರುದ್ರಯ್ಯ ವಿ.ವಿ ಆಯ್ಕೆಯಾಗಿದ್ದಾರೆ. … Continued

“ನಿಮ್ಮ ಅವಿರತ ಪ್ರಯತ್ನಗಳು ಇಲ್ಲದಿದ್ದರೆ….”: ಎಸ್.ಎಂ.ಕೃಷ್ಣಗೆ ಧನ್ಯವಾದ ಹೇಳಿ ಪತ್ರ ಬರೆದಿದ್ದ ಅಂದಿನ ಅಮೆರಿಕದ ಅಧ್ಯಕ್ಷ ಜಾನ್ ಕೆನಡಿ

ಬೆಂಗಳೂರು : ಇಂದು, ಮಂಗಳವಾರ ನಿಧನರಾದ ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ಅರ್ಧ ಶತಮಾನದ ರಾಜಕೀಯ ಜೀವನದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಹೀಗೆ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ದೇಶದ ರಾಜಕೀಯದಲ್ಲಿ ಆಳವಾದ ಧುಮುಕುವ ಮೊದಲು, ಅವರು ಅಮೆರಿಕದಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದಾಗ ಅಲ್ಲಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…!. ವರ್ಚಸ್ವಿ … Continued

“ನೀವು ಗೆದ್ದಾಗ ಇವಿಎಂ ತಿರುಚುವುದಿಲ್ಲವೇ ? ; ಬ್ಯಾಲೆಟ್ ಪೇಪರ್ ಮೂಲಕ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಚುನಾವಣೆಯಲ್ಲಿ ಮತದಾನದಕ್ಕೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ವ್ಯವಸ್ಥೆ ಮರುಜಾರಿಗೊಳಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಂದ್ರಬಾಬು ನಾಯ್ಡು ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರಂತಹ ನಾಯಕರು ವಿದ್ಯುನ್ಮಾನ ಮತಯಂತ್ರ (ಇವಿಎಂ) ತಿರುಚಿರುವುದನ್ನು ಪ್ರಶ್ನಿಸಿದ್ದಾರೆ ಎಂಬ ಅರ್ಜಿದಾರರ ವಾದ ತೂಕದಿಂದ ಕೂಡಿಲ್ಲ … Continued

ವೀಡಿಯೊ..| ಚುನಾವಣೆ : ಕರ್ತವ್ಯ ನಿರತ ಹಿರಿಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ ಅಭ್ಯರ್ಥಿ…!

ಜೈಪುರ: ರಾಜಸ್ತಾನದ  ಟೋಂಕ್ ಜಿಲ್ಲೆಯ ಡಿಯೋಲಿ-ಉನಿಯಾರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತಗಟ್ಟೆಯ ಹೊರಗೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ಸ್ವತಂತ್ರ ಅಭ್ಯರ್ಥಿ ನರೇಶ ಮೀನಾ ಅವರನ್ನು ರಾಜಸ್ಥಾನ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರಾಮೀಣ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಕ್ಷಣಾ ಕವಚಗಳು ಮತ್ತು ಹೆಲ್ಮೆಟ್‌ಗಳನ್ನು ಧರಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸಿದ … Continued