ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ…

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ನಡೆಯುತ್ತಿದೆ. ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಬಿಹಾರದ ತಲಾ 5 ಕ್ಷೇತ್ರಗಳು, … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued

ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued