ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಬಿಜೆಪಿ ಪ್ರಣಾಳಿಕೆ ಬಿಡುಗಡೆ : ವೃದ್ಧರಿಗೆ ಉಚಿತ ಚಿಕಿತ್ಸೆ, ಬಡವರಿಗೆ ಉಚಿತ ಪಡಿತರ, ಏಕರೂಪ ನಾಗರಿಕ ಸಂಹಿತೆ ಜಾರಿ, ಮುದ್ರಾ ಸಾಲ ಯೋಜನೆ ಮೊತ್ತ ಹೆಚ್ಚಳ, ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ …

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿಯಂದು ಸಂಕಲ್ಪ ಪತ್ರದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್ ಹಾಗೂ ರಾಜನಾಥ್‌ ಸಿಂಗ್‌ … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಸಮುದ್ರದೊಳಗೆ 60 ಅಡಿ ಆಳದ ನೀರಿನಲ್ಲಿ ಮತದಾನ ಜಾಗೃತಿ ಅಭಿಯಾನ | ವೀಕ್ಷಿಸಿ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಭಾರತೀಯ ಚುನಾವಣಾ ಆಯೋಗವುಮತದಾನ ಜಾಗೃತಿಗೆ ಎಲ್ಲ ಪ್ರಯತ್ನವನ್ನೂ ಮಾಡುತ್ತಿದೆ. ನೀರೊಳಗಿನ ಮತದಾನ ಜಾಗೃತಿ ಮಾಡುವ ಮೂಲಕ ಚುನಾವಣಾ ಆಯೋಗವು ಇತ್ತೀಚೆಗೆ ಒಂದು ವಿಶಿಷ್ಟ ಉಪಕ್ರಮವನ್ನು ಕೈಗೊಂಡಿದೆ. ಅಭಿಯಾನದ ಭಾಗವಾಗಿ, ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ವಿದ್ಯಮಾನವಾದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಮಹತ್ವವನ್ನು ಎತ್ತಿ ಹಿಡಿಯಲು ನುರಿತ ಸ್ಕೂಬಾ ಡೈವರ್‌ಗಳ ಗುಂಪು … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್‌ : 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂಬ ಸುಳ್ಳು ಸುದ್ದಿಯನ್ನು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ … Continued

‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued