ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು … Continued

ಲೋಕಸಭಾ ಚುನಾವಣೆ ಘೋಷಣೆ : 7 ಹಂತಗಳಲ್ಲಿ ಮತದಾನ ; ಜೂನ್‌ 4ಕ್ಕೆ ಫಲಿತಾಂಶ

ನವದೆಹಲಿ: ಲೋಕಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ … Continued

ಲೋಕಸಭೆ ಚುನಾವಣೆ: ಬಿಡುಗಡೆಯಾದ ಬಿಜೆಪಿ 267 ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ 24%ರಷ್ಟು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌…!

ನವದೆಹಲಿ: ಬಿಜೆಪಿ ಇದುವರೆಗೆ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವು 267 ಅಭ್ಯರ್ಥಿಗಳನ್ನು ಹೆಸರಿಸಿದೆ. ಅದರಲ್ಲಿ ಸುಮಾರು 24%ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ ಎಂದು ವರದಿಯೊಂದು ಹೇಳಿದೆ. ಅವರ ಕ್ಷೇತ್ರದಲ್ಲಿ ಸಂಭಾವ್ಯ ವಿರೋಧಿ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರವನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಪಕ್ಷವು ತಳಮಟ್ಟದಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು … Continued

ಲೋಕಸಭೆ ಚುನಾವಣೆ : ಬಿಜೆಪಿಯ ಎರಡನೇ ಪಟ್ಟಿಯಲ್ಲಿ ತ್ರಿಪುರ, ಮೈಸೂರಿನ ರಾಜವಂಶಸ್ಥರು…

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಬ್ಬರು ರಾಜವಂಶಸ್ಥರು ಸ್ಥಾನ ಪಡೆದಿದ್ದಾರೆ. ತ್ರಿಪುರಾದಿಂದ ಮಹಾರಾಣಿ ಕೃತಿ ಸಿಂಗ್ ದೇಬ್‌ಬರ್ಮಾ ಮತ್ತು ಹಿಂದಿನ ಮೈಸೂರು ರಾಜಮನೆತನದ ಮುಖ್ಯಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿ ಎರಡನೇ ಪಟ್ಟಿಯ 72 ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಕೃತಿ ಸಿಂಗ್ ದೇಬ್‌ಬರ್ಮಾ ಅವರಿಗೆ ತ್ರಿಪುರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲು … Continued

ಲೋಕಸಭೆ ಚುನಾವಣೆ 2024 : ಬಿಜೆಪಿಯಿಂದ 72 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ; ಸಂಪೂರ್ಣ ಪಟ್ಟಿ ಇಲ್ಲಿದೆ….

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಚುನಾವಣೆಗೆ ತನ್ನ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ತ್ರಿಪುರ, ತೆಲಂಗಾಣ, ದೆಹಲಿ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯು ಪಕ್ಷವು ನಾಗ್ಪುರದಿಂದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಲೋಕಸಭೆ ಚುನಾವಣೆ: ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿಯಲ್ಲಿ ಕಸರತ್ತು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆ ನಡೆಸಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾದರು.ಪಕ್ಷದ ಎರಡನೇ ಪಟ್ಟಿಯನ್ನು ಮಂಗಳವಾರ … Continued

ಲೋಕಸಭೆ ಚುನಾವಣೆ : ಈ ಕ್ಷೇತ್ರದಲ್ಲಿ ವಿಚ್ಛೇದಿತ ದಂಪತಿ ಮಧ್ಯೆಯೇ ನಡೆಯಲಿದೆ ಸ್ಪರ್ಧೆ…!

ಕೋಲ್ಕತ್ತಾ: ವಿಚ್ಛೇದಿತ ದಂಪತಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕಣಕ್ಕೆ ಇಳಿಯಲಿದ್ದಾರೆ…! ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭಾನುವಾರ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಇದು ಚರ್ಚೆಯ ವಿಷಯವಾಗಿದೆ. ಸುಜಾತಾ ಮೊಂಡಲ್ ಅವರು ತಮ್ಮ ಮಾಜಿ ಪತಿ ಸೌಮಿತ್ರಾ ಖಾನ್ ವಿರುದ್ಧ ಬಂಡಾಲ್‌ನ ಬಂಕುರಾ ಜಿಲ್ಲೆಯ ಬಿಷ್ಣುಪುರ ಕ್ಷೇತ್ರದಿಂದ … Continued

‘ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯ’: ತೃಣಮೂಲನಿಂದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬಗ್ಗೆ ಕಾಂಗ್ರೆಸ್‌

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭಾನುವಾರ (ಮಾರ್ಚ್‌ 10) ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂಬರುವ ಲೋಕಸಭೆ ಚುನಾವಣೆಗಳಿಗೆ ಸೀಟು ಹಂಚಿಕೆ ಮಾತುಕತೆಗೆ “ಬಾಗಿಲುಗಳು ಇನ್ನೂ ತೆರೆದಿವೆ” ಎಂದು ಕೆಲವೇ ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಮಾತನ್ನು ತಳ್ಳಿಹಾಕಿದೆ. ಕಾಂಗ್ರೆಸ್ ಮತ್ತು ತೃಣಮೂಲಎರಡೂ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ … Continued

ಹೆತ್ತ ತಾಯಿಯನ್ನು ಬಿಡ್ಲಿಕ್ಕೆ ಆಗುತ್ತಾ..? : ಸುಮಲತಾ ಪರ ಪ್ರಚಾರ ಮಾಡುವ ಸುಳಿವು ನೀಡಿದ ನಟ ದರ್ಶನ್

ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟುಕೊಡಲಿಕ್ಕೆ ಆಗುತ್ತದೆಯೇ ಎಂದು ನಟ ದರ್ಶನ್ ಹೇಳಿದ್ದು, ಈ ಮೂಲಕ ಈ ಸಲ ಕೂಡ ಲೋಕಸಭೆ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ ಪರ ಪ್ರಚಾರ ನಡೆಸುವ ಸುಳಿವು ನೀಡಿದ್ದಾರೆ. ಅವರು ಭಾನುವಾರ ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ … Continued