ಮೇ 4ರ ನಂತರ ವೇತನ ಪರಿಷ್ಕರಣೆ, ಮುಷ್ಕರ ಕೈಬಿಡಲು ಸವದಿ ಮನವಿ

ಬೆಂಗಳೂರು: ಈಗಾಗಲೇ ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ 6ನೇ ವೇತನ ಆಯೋಗದಂತೆ ಸಂಬಳ ಹೆಚ್ಚಳ ಸಾಧ್ಯವಾಗಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಸಾರಿಗೆ ಸಂಸ್ಥೆಯ ಸ್ಥಿತಿಗತಿ ಗಮನದಲ್ಲಿಟ್ಟು ಏ. 7 ರಿಂದ ನಡೆಸಲು … Continued

ಅವಳು ಭ್ರಷ್ಟಳು,ಮತ ಹಾಕಬೇಡಿ ಎಂದು ಮಗಳ ವಿರುದ್ಧವೇ ಮತದಾರರಿಗೆ ಮನವಿ ಮಾಡಿದ ಮಾಜಿ ಸಚಿವರ ಪತ್ನಿ..!

ಚೆನ್ನೈ: ಡಿಎಂಕೆ ಮಾಜಿ ಸಚಿವ ಅಲ್ಲಾಡಿ ಅರುಣಾ ಅವರ ವಿಧವೆ ಮತ್ತು ಅಲಂಗುಲಂ ವಿಧಾನಸಭಾ ಕ್ಷೇತ್ರದ ಡಿಎಂಕೆ ಅಭ್ಯರ್ಥಿ ಪೂಂಗೋಥೈ ಅವರ ತಾಯಿ ಕಮಲಾ ಆಲಾಡಿ ಅರುಣಾ ಅವರು ತಮ್ಮ ಮಗಳು “ಹೆಚ್ಚು ಭ್ರಷ್ಟರಾಗಿದ್ದರಿಂದ” ಮತ ಚಲಾಯಿಸಬಾರದು ಎಂದು ಮತದಾರರಿಗೆ ವಿನಂತಿ ಮಾಡಿದ್ದಾರೆ…! ಶನಿವಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ, ಕಮಲಾ ಅವರು … Continued

ನಿಗದಿತ ಸಮಯಕ್ಕೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡುವುದಿಲ್ಲ ಇಲ್ಲ. ನಿಗದಿತ ಸಮಯಕ್ಕೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಶಾಸಕ ಸುನೀಲುಕುಮಾರ ಅವರು ವಿಷಯ ಪ್ರಸ್ತಾಪಿಸಿದ ವೇಳೆ ಅವರು ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು … Continued

ತಮಿಳುನಾಡು ಚುನಾವಣೆ: ಆಸ್ತಿ ವಿವರ ಪ್ರಕಟಿಸಿದ ನಟಿ ಖುಷ್ಬೂ

ಚೆನ್ನೈ: ತಮಿಳುನಾಡಿನ ಥೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಿಂದ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ತಮ್ಮ ಆಸ್ತಿ ವಿವರ ನೀಡಿದ್ದು, ತಮ್ಮ ಬಳಿ ಒಟ್ಟು 22.55 ಕೋಟಿ ರೂ ಆಸ್ತಿ ಇರುವುದಾಗಿ ಘೋಷಣೆ ಮಾಡಿದ್ದಾರೆ. ಖುಷ್ಬೂ ತಮ್ಮ ಬಳಿ 17.99 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದ್ದು, … Continued

ಕೇರಳ ; ಪಿಣರಾಯಿ ವಿಜಯನ್‌ ವಿರುದ್ಧ ಮೃತ ವಲಯಾರ್ ಸಹೋದರಿಯರ ತಾಯಿ ಸ್ಪರ್ಧೆ

ತಿರುವನಂತಪುರಂ: 2017ರಲ್ಲಿ ಕೇರಳದ ಪಾಲಕ್ಕಾಡ್‌ನಲ್ಲಿ ಲೈಂಗಿಕ ಕಿರುಕುಳದ ನಂತರ ನಿಗೂಢವಾಗಿ ಮೃತಪಟ್ಟಿದ್ದ ವಲಯಾರ್ ಸಹೋದರಿಯರ ತಾಯಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಕಣ್ಣೂರು ಜಿಲ್ಲೆಯ ಧರ್ಮದಂ ವಿಧಾನಸಭಾ ಕ್ಷೇತ್ರದಿಂದ ತಾವು ಕಣಕ್ಕಿಳಿಯಲಿದ್ದು, ತಮ್ಮ ಮಕ್ಕಳಿಗೆ ನ್ಯಾಯ ದೊರೆಯದ ಕಾರಣ ಪ್ರತಿಭಟನಾ ರೂಪದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳದ ಪಾಲಕ್ಕಾಡ್‌ನಲ್ಲಿನ … Continued

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ಯಾಂಕ್‌ ಮುಚ್ತಾರೆ:ಮಮತಾ ವಾಗ್ದಾಳಿ

ಕೊಲ್ಕತ್ತಾ : ಬಿಜೆಪಿ ಬಂದರೆ ಅದು ಜನರ ಹಕ್ಕುಗಳು ಕೊನೆಯಾಗಲಿದೆ, ರಾಜ್ಯದಲ್ಲಿರುವ ಎಲ್ಲ ಬ್ಯಾಂಕ್‌ಗಲೂ ಮುಚ್ಚಲಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಂಗಳವಾರ ಬಂಗೂರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂದು ವೇಳೆ ಬಿಜೆಪಿ ಆಯ್ಕೆಯಾದರೆ, ರಾಜ್ಯದ ಎಲ್ಲ ಬ್ಯಾಂಕ್ ಗಳನ್ನು ಮುಚ್ಚಲಾಗುವುದು, ನಿಮ್ಮ … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಕೇರಳ ವಿಧಾನಸಭಾ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಜನತಾದಳ (ಜಾತ್ಯತೀತ) ೨೦೨೧ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕೋವಲಂ, ಅಂಕಮಲಿ, ಚಿತ್ತೂರು ಮತ್ತು ತಿರುವಲ್ಲಾ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅನುಮೋದಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued

“ಇತನಾ ಗುಸ್ಸಾ ಕ್ಯೋಂ, ದೀದಿ?: ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಹಾಡು

ಇತನಾ ಗುಸ್ಸಾ ಕ್ಯೋಂ, ದೀದಿ?(ಇಷ್ಟೊಂದು ಕೋಪ ಏಕೆ, ದೀದಿ), ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಹೊಸ ಪ್ರಚಾರದ ಜಾಹೀರಾತು. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮನ್ನು ‘ರಾವಣ’, ‘ರಾಕ್ಷಸ’, ದೈತ್ಯ ಮತ್ತು ‘ಗೂಂಡಾ’ ಎಂದು ಕರೆದಿದ್ದಕ್ಕೆ ಕೊಲ್ಕತ್ತಾದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಇತನಾ ಗುಸ್ಸಾ ಕ್ಯೋಂ ದೀದಿ (ಇಷ್ಟೊಂದು ಕೋಪ … Continued