ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ … Continued

ರಾಜ್ಯಸಭಾ ಚುನಾವಣೆ: ಬಿಜೆಪಿ ಅಧ್ಯಕ್ಷ ನಿತಿನ್ ನವೀನ ಸೇರಿ 9 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ 9 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯವಾರು ಅಭ್ಯರ್ಥಿಗಳ ವಿವರ ಹೀಗಿದೆ: ಬಿಹಾರ : ನಿತಿನ್ ನವೀನ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ) ಮತ್ತು ಶಿವೇಶಕುಮಾರ ಅಸ್ಸಾಂ : ತೇರಾಶ್ ಗೋವಾಲಾ … Continued

ರಾಜ್ಯಸಭೆ 37 ಸ್ಥಾನಗಳಿಗೆ ಚುನಾವಣೆ : ಎನ್‌ ಡಿಎಗೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ; ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯ ಭೀತಿ

ನವದೆಹಲಿ: ಮಾರ್ಚ್ 16 ರಂದು 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇಲ್ಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ತನ್ನ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಸೂಚನೆಗಳಿವೆ. ಮಹಾರಾಷ್ಟ್ರ, ಬಿಹಾರ ಮೊದಲಾದ ರಾಜ್ಯಗಳಲ್ಲಿ ವಿರೋಧ ಪಕ್ಷಗಳ ಆಂತರಿಕ ಹಿತಾಸಕ್ತಿಗಳು ಭಿನ್ನವಾಗಿರುವುದರಿಂದ, ಇಂಡಿಯಾ (INDIA) ಮೈತ್ರಿಕೂಟವು ಒಗ್ಗಟ್ಟಾಗಿ ಉಳಿಯುವುದೇ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. … Continued

ಬಾಂಗ್ಲಾದೇಶ ಚುನಾವಣೆ ಫಲಿತಾಂಶ : ಭರ್ಜರಿ ಜಯದತ್ತ ಬಿಎನ್‌ಪಿ ; ಪ್ರಧಾನಿ ಹಾದಿಯಲ್ಲಿ ತಾರಿಕ್ ರಹಮಾನ್

ಢಾಕಾ : ಬಾಂಗ್ಲಾದೇಶದಲ್ಲಿ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಐತಿಹಾಸಿಕ ಗೆಲುವಿನತ್ತ ಮುನ್ನಡೆದಿದೆ. 2024 ರ ಮಾರಕ ದಂಗೆಯ ನಂತರ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷವು ಭರ್ಜರಿ ಗೆಲುವಿನ ಹಾದಿಯಲ್ಲಿದೆ, ಆ ಪಕ್ಷದ ನಾಯಕ ತಾರಿಕ್ ರೆಹಮಾನ್ ಪ್ರಧಾನಿಯಾಗಲಿದ್ದಾರೆ. ಬಾಂಗ್ಲಾದೇಶದ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗವು ಇಂದು, ಶುಕ್ರವಾರ (ಫೆಬ್ರವರಿ 13) … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್‌

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 20ರಂದು ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ. ಈ ಕುರಿತು ಬಿಜೆಪಿಯ ರಾಷ್ಟ್ರೀಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಜನವರಿ 19ರಂದು (ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ) ನಾಮಪತ್ರ ಸಲ್ಲಿಸಲಾಗುತ್ತದೆ. ಜನವರಿ 19 … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ :ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ; ಬಿಜೆಪಿ ಅತಿದೊಡ್ಡ ಪಕ್ಷ

 ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದೆ. ಒಟ್ಟು 227 ಸದಸ್ಯ ಬಲದ ಪಾಲಿಕೆಯಲ್ಲಿ ಮಹಾಯುತಿ 120 ಸ್ಥಾನಗಳಲ್ಲಿ ಮುಂದಿದ್ದು,  ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹಾಯುತಿ ಮೈತ್ರಿಕೂಟ 120 ಸ್ಥಾನಗಳಲ್ಲಿ ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 93 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷ ಶಿವಸೇನೆ 27 ಸ್ಥಾನಗಳಲ್ಲಿ … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆ ; ಬಿಜೆಪಿ ಮೈತ್ರಿಕೂಟ-ಶಿವಸೇನೆಯಲ್ಲಿ ಗೆಲ್ಲೋದು ಯಾರು ?. ಎಕ್ಸಿಟ್ ಪೋಲ್‌ ಹೇಳಿದ್ದೇನು..?

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ಮತ್ತು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ (ಮಹಾಯುತಿ) ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (BMC)ಯ ಒಟ್ಟು 227 ವಾರ್ಡ್‌ಗಳ ಪೈಕಿ … Continued

ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಕೆರೆಗದ್ದೆ ಆಯ್ಕೆ

ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ 3 ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ವಿಜಯ ಕರ್ನಾಟಕ ವರದಿಗಾರ ಕೃಷ್ಣಮೂರ್ತಿ ಕೆರೆಗದ್ದೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶನಿವಾರ ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಚುನಾವಣೆಯಲ್ಲಿ ಕೃಷ್ಣಮೂರ್ತಿ ಕೆರೆಗದ್ದೆ 23 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ವಿಶ್ವವಾಣಿ ಜಿಲ್ಲಾ ವರದಿಗಾರ್ತಿ ವಿನುತಾ ಹೆಗಡೆ 6 ಮತಗಳನ್ನು ಪಡೆದರು. … Continued

ಎಸ್‌ ಐಆರ್‌ : ತಮಿಳುನಾಡು ಮತದಾರರ ಪಟ್ಟಿಯಿಂದ 97 ಲಕ್ಷ ಹೆಸರುಗಳ ಕಡಿತ ; ಮತದಾರರ ಸಂಖ್ಯೆಯಲ್ಲಿ 15.2% ಕುಸಿತ

ಚೆನ್ನೈ: ತಮಿಳುನಾಡು ಚುನಾವಣಾ ಆಯೋಗವು ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ಕಾರ್ಯವನ್ನು ಪೂರ್ಣಗೊಳಿಸಿದ್ದು, ರಾಜ್ಯದ ಒಟ್ಟು 6.41 ಕೋಟಿ ಮತದಾರರ ಪೈಕಿ ಬರೋಬ್ಬರಿ 97.4 ಲಕ್ಷ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು ಮತದಾರರ ಸಂಖ್ಯೆಯಲ್ಲಿ ಶೇ. 15.2 ರಷ್ಟು ಭಾರಿ ಇಳಿಕೆಯಾಗಿದ್ದು, … Continued