ಸಮುದ್ರದೊಳಗೆ 60 ಅಡಿ ಆಳದ ನೀರಿನಲ್ಲಿ ಮತದಾನ ಜಾಗೃತಿ ಅಭಿಯಾನ | ವೀಕ್ಷಿಸಿ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಭಾರತೀಯ ಚುನಾವಣಾ ಆಯೋಗವುಮತದಾನ ಜಾಗೃತಿಗೆ ಎಲ್ಲ ಪ್ರಯತ್ನವನ್ನೂ ಮಾಡುತ್ತಿದೆ. ನೀರೊಳಗಿನ ಮತದಾನ ಜಾಗೃತಿ ಮಾಡುವ ಮೂಲಕ ಚುನಾವಣಾ ಆಯೋಗವು ಇತ್ತೀಚೆಗೆ ಒಂದು ವಿಶಿಷ್ಟ ಉಪಕ್ರಮವನ್ನು ಕೈಗೊಂಡಿದೆ. ಅಭಿಯಾನದ ಭಾಗವಾಗಿ, ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ವಿದ್ಯಮಾನವಾದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಮಹತ್ವವನ್ನು ಎತ್ತಿ ಹಿಡಿಯಲು ನುರಿತ ಸ್ಕೂಬಾ ಡೈವರ್‌ಗಳ ಗುಂಪು … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್‌ : 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂಬ ಸುಳ್ಳು ಸುದ್ದಿಯನ್ನು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ … Continued

‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ, ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಭರವಸೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಣಾಳಿಕೆಯ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. … Continued

ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued

ಲೋಕಸಭೆ ಚುನಾವಣೆ : 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಕಾಂಗ್ರೆಸ್ ಪಕ್ಷ ಮಂಗಳವಾರ ಲೋಕಸಭೆ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ಕಡಪಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಇತ್ತೀಚಿನ ಪಟ್ಟಿಯಲ್ಲಿ ಒಡಿಶಾದಿಂದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದಿಂದ ಐದು ಅಭ್ಯರ್ಥಿಗಳು, ಬಿಹಾರದಿಂದ ಮೂವರು ಮತ್ತು ಪಶ್ಚಿಮ ಬಂಗಾಳದಿಂದ ಒಬ್ಬ ಅಭ್ಯರ್ಥಿ ಸೇರಿದ್ದಾರೆ. ಬಿಹಾರದಲ್ಲಿ … Continued

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ; ಶ್ರೀಗಳು ಹೇಳಿದ್ದೇನು..?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ I ಈ ಬಗ್ಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಧಾರವಾಡದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, … Continued

ಲೋಕಸಭೆ ಚುನಾವಣೆ: ಏ.3 ರಂದು ಮಂಡ್ಯದಲ್ಲೇ ಮತ್ತೊಂದು ಸಭೆ ನಡೆಸಿದ ನಂತರ ನಿರ್ಧಾರ ಪ್ರಕಟಿಸ್ತೇನೆ ; ಬೆಂಗಳೂರು ಸಭೆ ನಂತ್ರ ಸುಮಲತಾ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳ ಜೊತೆ ಚರ್ಚಿಸಿ ತನ್ನ ನಿರ್ಧಾರವನ್ನ ಇಂದು ಪ್ರಕಟಿಸುವುದಾಗಿ ತಿಳಿಸಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ ಶನಿವಾರ (ಮಾರ್ಚ್‌ ೩೦) ಮಂಡ್ಯ ಲೋಕಸಭಾ ಕ್ಷೇತ್ರದ ಅಭಿಮಾನಿಗಳ ಸಭೆಯ ನಂತರ ಏಪ್ರಿಲ್ 3ಕ್ಕೆ ಮಂಡ್ಯದಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ … Continued

ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued