ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ವಿಧಾನಸಭೆ ಚುನಾವಣೆ : ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಜೈ, ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಎಂದ ಬಹುತೇಕ ಎಕ್ಸಿಟ್‌ ಪೋಲ್‌ಗಳು…

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಶನಿವಾರ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆ (exit polls)ಗಳು ಅಂದಾಜಿಸಿವೆ. ಹೀಗಾದರೆ ಬಿಜೆಪಿಯ 10 ವರ್ಷಗಳ ಅಧಿಕಾರದ ಓಟಕ್ಕೆ ತಡೆ ಬೀಳಲಿದೆ. ಒಟ್ಟು ಏಳು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued

ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued

ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!

ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued

ಶಿರಸಿ ನಗರಸಭೆಯ ನೂತನ ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ ಭಟ್ಟ ಆಯ್ಕೆ

ಶಿರಸಿ: ಇಲ್ಲಿನ ನಗರಸಭೆಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡು ಸ್ಥಾನಗಳು ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ ಭಟ್ಟ ಜಯಗಳಿಸಿದ್ದಾರೆ. ಶಿರಸಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಗುರುವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಅಧಿಕಾರಿಯೂ ಆಗಿರುವ ಸಹಾಯಕ ಆಯುಕ್ತೆ … Continued

ಬಾಂಗ್ಲಾದೇಶ ಬಿಕ್ಕಟ್ಟು | ಹಂಗಾಮಿ ಸರ್ಕಾರ ಚುನಾವಣೆ ನಡೆಸಲು ನಿರ್ಧರಿಸಿದಾಗ ಶೇಖ್ ಹಸೀನಾ ಬಾಂಗ್ಲಾದೇಶಕ್ಕೆ ಹಿಂತಿರುಗುತ್ತಾರೆ ; ಹಸೀನಾ ಪುತ್ರ

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದಾಗ ಅವರು ತಮ್ಮ ದೇಶಕ್ಕೆ ಹಿಂದಿರುಗಲಿದ್ದಾರೆ ಎಂದು ಅವರ ಮಗ ಹೇಳಿದ್ದಾರೆ. ವಾರಗಳ ಮಾರಣಾಂತಿಕ ಪ್ರತಿಭಟನೆಗಳ ನಂತರ ಹಸೀನಾ ಸೋಮವಾರ ಭಾರತಕ್ಕೆ ಪಲಾಯನ ಮಾಡಿದ್ದರು. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ನೇತೃತ್ವದ ಉಸ್ತುವಾರಿ ಸರ್ಕಾರವು ಗುರುವಾರ ಪ್ರಮಾಣ ವಚನ … Continued

12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತ್ರಿಪುರಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಆಗಸ್ಟ್ 26 … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ : ರಾಮಪ್ಪ ಬಡಿಗೇರ ನೂತನ‌ ಮೇಯರ್, ದುರಗಮ್ಮ ಬಿಜವಾಡ ಉಪಮೇಯರ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಮಹಾಪೌರರಾಗಿ ಬಿಜೆಪಿಯ ರಾಮಪ್ಪ ಬಡಿಗೇರ ಹಾಗೂ ಉಪ ಮಹಾಪೌರರಾಗಿ ದುರಗಮ್ಮ ಬಿಜವಾಡ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಮಹಾಪೌರ ಚುನಾವಣೆಗೆ ಬಿಜೆಪಿಯಿಂದ ರಾಮಪ್ಪ ಬಡಿಗೇರ, ಕಾಂಗ್ರೆಸ್ ನಿಂದ ಇಮ್ರಾನ್ ಎಲಿಗಾರ, ಎಂಐಎಎಂ ನಿಂದ ಹುಸೇನ್ ಬಿ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿಯ ರಾಮಪ್ಪ ಬಡಿಗೇರಗೆ 47 ಮತ ಪಡೆದು ಮೇಯರ್‌ … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued