ಕಾರವಾರ | ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ 7 ಎಮ್ಮೆಗಳು ಸಾವು

ಕಾರವಾರ: ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಕೃಷಿಕ ಮಹಿಳೆಯರ 7 ಜಾನುವಾರುಗಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರದಲ್ಲಿ ನಡೆದಿದೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗದ್ದೆ ಕೆಲಸದ ಜೊತೆ ಎಮ್ಮೆಗಳನ್ನು ಸಾಕಿ ಪಾಲನೆ ಮಾಡುತ್ತಿರುವ ಕಿನ್ನರದ ಮಸೀದಿ ಹತ್ತಿರದ … Continued

ಬೆಳಗಾವಿ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಮಹಿಳೆಯರು ಸಾವು

ಬೆಳಗಾವಿ: ತಾಲೂಕಿನ ಸುಳೇಬಾವಿ ಗ್ರಾಮದ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಮೃತರನ್ನು ಗ್ರಾಮಸ್ಥರಾದ ಸವಿತಾ ಫಕ್ಕೀರಪ್ಪ ಒಂಟಿ (34) ಹಾಗೂ ಕಲಾವತಿ ಮಾರುತಿ ಬೀದರವಾಡಿ (41) ಎಂದು ಗುರುತಿಸಲಾಗಿದೆ. ಸೋಮವಾರ ಮಹಿಳಾ ಮಂಡಳದ ಸಭೆ ದೇವಸ್ಥಾನದಲ್ಲಿ ನಿಗದಿಯಾಗಿತ್ತು. ಎಲ್ಲರೂ ದೇವಸ್ಥಾನದಲ್ಲಿ ಸೇರಿದ್ದರು. ಸಭೆ … Continued

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿ ಬಂಧನ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್‌ ಧನರಾಜ ಎಂಬಾತನೇ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು … Continued

ನಟ ಯಶ್ ಜನ್ಮದಿನಕ್ಕೆ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವು

ಗದಗ: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಸೂರಣಗಿ ಗ್ರಾಮದ ಹನುಮಂತ ಹರಿಜನ(21), ಮುರಳಿ ನಡವಿನಮನಿ(20), … Continued

ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ​ಮ್ಯಾನ್ ಸಾವು

ಬೆಳಗಾವಿ : ಚನ್ನಮ್ಮನ ಕಿತ್ತೂರಿನ ಕೆಇಬಿ ಆವರಣದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕಂಬದ ಮೇಲೆಯೇ ಲೈನ್ ​ಮ್ಯಾನ್ ಮೃತಪಟ್ಟ ದಾರುಣ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಎಂದು ಗುರುತಿಸಲಾಗಿದೆ. ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಕಂಬ ಹತ್ತಿಸಿದ್ದಕ್ಕೆ ಪ್ರೇಮಾನಂದ ಅವರ ಕುಟುಂಬಸ್ಥರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ … Continued

ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ತಂತಿ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ವಿದ್ಯುತ್‌ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋದ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಇಂದು, ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇಬ್ಬರು ಮಕ್ಕಳಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬಾಲಕ ಸುಪ್ರಿತ್‌ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮನೆಯ ಮಹಡಿಗೆ … Continued

ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್‌ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued