ವೀಡಿಯೊ | ಹಾಸನ ; ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ರೈತ : ಕಾರಿನ ಕೆಳಗೆ ತೂರಿಕೊಂಡು ಜೀವ ರಕ್ಷಣೆ

ಹಾಸನ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ರೈತರು ಆನೆ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕರ್ನಾಟಕದ ಹಾಸನ ಜಿಲ್ಲೆಯ ಕೆಸಗುಳಿ ಗ್ರಾಮದಲ್ಲಿ ಮಾರ್ಚ್ 3 ರಂದು ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ಆನೆಯೊಂದು ಜಮೀನಿಗೆ ನುಗ್ಗಿ ಅಡಿಕೆ ತೋಟದ ಕೆಲಸದಲ್ಲಿ ನಿರತರಾಗಿದ್ದ ರೈತ ಕಾರ್ಮಿಕರೊಬ್ಬರ ಮೇಲೆ ದಾಳಿ ಮಾಡಲು ಯತ್ನಿಸುತ್ತಿರುವುದು ಕಂಡು ಬಂದಿದೆ. ರೈತ … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued

ಕಾಡಾನೆ ದಾಳಿ : ವನ್ಯಜೀವಿ ಶಾರ್ಪ್‌ ಶೂಟರ್‌ ವೆಂಕಟೇಶ ಸಾವು

ಹಾಸನ: ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ಭೀಮ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿ ವೆಂಕಟೇಶ, ಹಾಸನ ಆಸ್ಪತ್ರೆಯಲ್ಲಿ … Continued

ಆನೆ ದಾಳಿಗೆ ಮಹಿಳೆ ಸಾವು: ಸಾಂತ್ವನ ಹೇಳಲು ಬಂದ ಶಾಸಕರ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿರುವ ಆರೋಪಿತ ಘಟನೆ ಮೂಡಿಗೆರೆ ತಾಲೂಕಿನ ತಾಲೂಕಿನ ಕುಂದೂರಿನಲ್ಲಿ ನಡೆದಿದೆ. ಕುಂದೂರಿನ ತೋಟದಲ್ಲಿ ಭಾನುವಾರ ಆನೆದಾಳಿಯಿಂದ ಶೋಭಾ (45) ಎಂಬುವರು ಮೃತಪಟ್ಟಿದ್ದರು. ವಿಷಯ ತಿಳಿದು ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೂ … Continued