ವೀಡಿಯೊಗಳು… | ಪ್ರಸಿದ್ಧ ಮಣಕುಲಂಗರ ದೇವಸ್ಥಾನ ಉತ್ಸವದ ವೇಳೆ ರೊಚ್ಚಿಗೆದ್ದ ಆನೆಗಳು; 3 ಸಾವು, 30 ಜನರಿಗೆ ಗಾಯ

ಕೋಝಿಕ್ಕೋಡ್: ಗುರುವಾರ ಸಂಜೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವದ ವೇಳೆ ಎರಡು ಆನೆಗಳು ರೊಚ್ಚಿಗೆದ್ದು ನುಗ್ಗಿದ್ದರಿಂದ ಮೂವರು ಮೃತಪಟ್ಟು 30 ಮಂದಿ ಗಾಯಗೊಂಡ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಕೊಯಿಲಾಂಡಿ ಪ್ರದೇಶದ ಮಣಕುಲಂಗರ ದೇವಸ್ಥಾನದಲ್ಲಿ ಉತ್ಸವದ ಸಮಯದಲ್ಲಿ ಪಟಾಕಿಗಳನ್ನು ಜೋರಾಗಿ ಸಿಡಿಸಿದ್ದರಿಂದ ಪೀತಾಂಬರನ್ ಎಂಬ ಆನೆಯು ಗಾಬರಿಗೊಂಡು ಓಡಿದ ನಂತರ ನಂತರ ಘಟನೆ ಪ್ರಾರಂಭವಾಯಿತು. … Continued

ವೀಡಿಯೊ…| ಕಾಡಾನೆ ದಾಳಿಯಿಂದ ಜರ್ಮನ್ ಪ್ರವಾಸಿಗ ಸಾವು

ಕೊಯಮತ್ತೂರು: ತಮಿಳುನಾಡಿನ ಅಣ್ಣಾಮಲೈ ಹುಲಿ ಸಂರಕ್ಷಿತ ಪ್ರದೇಶದ (ಎಟಿಆರ್) ಪೊಲ್ಲಾಚಿ-ವಾಲ್ಪಾರೈ ರಸ್ತೆಯ ಟೈಗರ್ ವ್ಯಾಲಿ ಬಳಿ ಮಂಗಳವಾರ ಸಂಜೆ ಕಾಡಾನೆಯ ದಾಳಿಯಿಂದಾಗಿ 77 ವರ್ಷದ ಜರ್ಮನ್ ಪ್ರವಾಸಿಗನೊಬ್ಬ ಸಾವಿಗೀಡಾಗಿದ್ದಾರೆ. ಮೃತರನ್ನು ಮಿಕೆಲ್ ಜುರ್ಸೆನ್ ಎಂದು ಗುರುತಿಸಲಾಗಿದೆ. ಆತ ಬಾಡಿಗೆ ದ್ವಿಚಕ್ರ ವಾಹನದಲ್ಲಿ ಸಂಜೆ 6 ಗಂಟೆ ಸುಮಾರಿಗೆ ವಾಲ್ಪಾರೈ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. … Continued

ಹಾಸನ : ಕಾಡಾನೆ ದಾಳಿಗೆ ವೃದ್ಧ ಸಾವು; ಕೊಂದ ನಂತರ ಶವ ಮುಚ್ಚಿಟ್ಟು ಹೋದ ಆನೆ…!

ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ … Continued

ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

ಜಶ್ಪುರ: ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆನೆ ದಾಳಿಗೆ ಈವರೆಗೆ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಬಾಗೀಚಾ ನಗರ ಪಂಚಾಯತ್‌ನ ಗಮ್ಹ್ರಿಯಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಅವರು … Continued

ವೀಡಿಯೊ | ಹಾಸನ ; ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ರೈತ : ಕಾರಿನ ಕೆಳಗೆ ತೂರಿಕೊಂಡು ಜೀವ ರಕ್ಷಣೆ

ಹಾಸನ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ರೈತರು ಆನೆ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕರ್ನಾಟಕದ ಹಾಸನ ಜಿಲ್ಲೆಯ ಕೆಸಗುಳಿ ಗ್ರಾಮದಲ್ಲಿ ಮಾರ್ಚ್ 3 ರಂದು ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ಆನೆಯೊಂದು ಜಮೀನಿಗೆ ನುಗ್ಗಿ ಅಡಿಕೆ ತೋಟದ ಕೆಲಸದಲ್ಲಿ ನಿರತರಾಗಿದ್ದ ರೈತ ಕಾರ್ಮಿಕರೊಬ್ಬರ ಮೇಲೆ ದಾಳಿ ಮಾಡಲು ಯತ್ನಿಸುತ್ತಿರುವುದು ಕಂಡು ಬಂದಿದೆ. ರೈತ … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued

ಕಾಡಾನೆ ದಾಳಿ : ವನ್ಯಜೀವಿ ಶಾರ್ಪ್‌ ಶೂಟರ್‌ ವೆಂಕಟೇಶ ಸಾವು

ಹಾಸನ: ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ಭೀಮ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿ ವೆಂಕಟೇಶ, ಹಾಸನ ಆಸ್ಪತ್ರೆಯಲ್ಲಿ … Continued

ಆನೆ ದಾಳಿಗೆ ಮಹಿಳೆ ಸಾವು: ಸಾಂತ್ವನ ಹೇಳಲು ಬಂದ ಶಾಸಕರ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿರುವ ಆರೋಪಿತ ಘಟನೆ ಮೂಡಿಗೆರೆ ತಾಲೂಕಿನ ತಾಲೂಕಿನ ಕುಂದೂರಿನಲ್ಲಿ ನಡೆದಿದೆ. ಕುಂದೂರಿನ ತೋಟದಲ್ಲಿ ಭಾನುವಾರ ಆನೆದಾಳಿಯಿಂದ ಶೋಭಾ (45) ಎಂಬುವರು ಮೃತಪಟ್ಟಿದ್ದರು. ವಿಷಯ ತಿಳಿದು ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೂ … Continued