ಹುಣಸೂರು: ಸಾಕಾನೆ ಶಿಬಿರದಲ್ಲಿದ್ದ ಹೆಣ್ಣಾನೆ ಸಾವು

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ವನ್ಯಜೀವಿ ವಲಯದ ಸಾಕಾನೆ ಶಿಬಿರದಲ್ಲಿ ಜೆಮಿನಿ ಸರ್ಕಸ್ ಕಂಪನಿಯಿಂದ ವಶಪಡಿಸಿಕೊಂಡ ೪ ಆನೆಗಳಲ್ಲಿ ಒಂದಾದ ಹೆಣ್ಣು ಆನೆಯೊಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ೬೬ ವರ್ಷ ಪ್ರಾಯದ ಹೆಣ್ಣಾನೆಯನ್ನು ಪುನರ್ವಸತಿಗೊಂಡ ದೊಡ್ಡಹರವೆ ಸಾಕಾನೆ ಶಿಬಿರದಲ್ಲಿ ಅರಣ್ಯ ರಕ್ಷಣಾ ಕಾರ್ಯಕ್ಕೆ ಬಳಸಿಕೊಂಡು ಪಾಲನೆ ಮಾಡಲಾಗುತ್ತಿತ್ತು. ಕಳೆದ ೨ ತಿಂಗಳಿಂದ … Continued

ವಿದ್ಯುತ್‌ ತಗುಲಿ 40 ವರ್ಷದ ಗಂಡಾನೆ ಸಾವು

ರಾಮನಗರ: ಗಣೇಶನ ಹಬ್ಬನ ದಿವಸವೇ ಆನೆಯೊಂದು ಮೃತಪಟ್ಟಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ವರದಿಯಾಗಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಸಮೀಪದ ಎನ್. ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ 40 ವರ್ಷದ ಗಂಡಾನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ. … Continued