ವೀಡಿಯೊ..| ದೇವಾಲಯದ ಉತ್ಸವದ ವೇಳೆ ಆಘಾತಕಾರಿ ಘಟನೆ ; ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ

 ತ್ರಿಶೂರ್ : ಕೇರಳದ ತ್ರಿಶೂರ್ ಜಿಲ್ಲೆಯ ಅನ್ನಮನದ ಮಹಾದೇವ ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ಹಠಾತ್ತನೆ ಆಕ್ರಮಣಕಾರಿಯಾಗಿ ವರ್ತಿಸಿ,  ವ್ಯಕ್ತಿಯೊಬ್ಬರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ಗುರುವಾರ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಮೆರವಣಿಗೆಗಾಗಿ ಆನೆಯನ್ನು ಸಿಂಗರಿಸಿ ನಿಲ್ಲಿಸಲಾಗಿತ್ತು. ದೇವರ ವಿಗ್ರಹವನ್ನು ಆನೆಯ ಮೇಲೆ ಪ್ರತಿಷ್ಠಾಪಿಸಲು ಸಿದ್ಧತೆ ನಡೆಸುತ್ತಿದ್ದಾಗ, ಮಾವುತನು ಅರ್ಚಕರೊಬ್ಬರಿಗೆ ಆನೆಯ ಮೇಲೆ ಹತ್ತಲು ಸಹಾಯ … Continued