ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರರಿಗೆ ಕಾಂತಾವರ ಕನ್ನಡ ಸಂಘದ ʼಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿʼ

ಉಡುಪಿ: ಕಾಂತಾವರ ಕನ್ನಡ ಸಂಘವು ಕೊಡಮಾಡುವ ಸಾಹಿತ್ಯ, ಸಂಶೋಧನೆ, ಪತ್ರಿಕೋದ್ಯಮ, ಶಿಕ್ಷಣ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಜನ ಸಾಧಕರಿಗೆ ಸಂಘದ ಪ್ರತಿಷ್ಠಿತ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಲ್ಲದೆ ಓರ್ವರಿಗೆ ವಾರ್ಷಿಕ ಗೌರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದನ್ನು ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಕನ್ನಡ ಸಂಘದ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗಳಾದ ಕೆ.ಶಾಮರಾವ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ಶೈಲಜಾ ಗೋರನಮನೆ ಅವರಿಗೆ, ಡಾ.ಯು ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಗಣೇಶ ಇಟಗಿ ಹಾಗೂ ಜಿ.ಎಸ್ ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ದೀಪಕಕುಮಾರ ಶೇಣ್ವಿ ಅವರಿಗೆ ನೀಡಿ ಗೌರವಿಸಲಾಯಿತು. ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued