ಗೋವಾ ಭೂ ಕಬಳಿಕೆ-ಹಣ ಅಕ್ರಮ ವರ್ಗಾವಣೆ ಪ್ರಕರಣ; ಆರೋಪಿಯ ಕಾರವಾರದ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ : ಗೋವಾದ ಬಹುಕೋಟಿ ರೂಪಾಯಿ ಮೌಲ್ಯದ ಭೂ ಕಬಳಿಕೆ ಹಾಗೂ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕಾರವಾರದ ಕೊಡಿಬಾಗ್‌ನಲ್ಲಿರುವ ಸುಲೈಮಾನ್ ಖಾನ್ ಸಿದ್ದೀಕ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಬಾಗ್‌ನ ಮಿಡ್‌ಮ್ಯಾಕ್ ಆರ್ಕಿಡ್ ಅಪಾರ್ಟ್‌ಮೆಂಟ್‌ನಲ್ಲಿರುವ ಸಿದ್ದೀಕ್ ಅವರ ಮನೆಗೆ ಭೇಟಿ ನೀಡಿದ … Continued

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ : 21 ಕಡೆ ಇ.ಡಿ. ದಾಳಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ  ವಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಮನೆ ಸೇರಿದಂತೆ 21 ಕಡೆಗಳಲ್ಲಿ ಬೆಂಗಳೂರು ವಲಯದ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಇಂದು, ಮಂಗಳವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. .ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ … Continued

ಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ

 ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್‌ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು … Continued

ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರ ಮನೆ ಮೇಲೆ ಇ.ಡಿ. ದಾಳಿ

ಬೆಳಗಾವಿ : ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ನ ಮಾಲೀಕ ಶಿವಾನಂದ ನೀಲಣ್ಣವರ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಮತ್ತು ಹುಕ್ಕೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೆಂಗಳೂರು ಹಾಗೂ ಗೋವಾದ ಇ.ಡಿ. ಅಧಿಕಾರಿಗಳ … Continued

ಇ.ಡಿ.ದಾಳಿ ; ಮಂಜುನಾಥ, ಆಪ್ತರ ಬಳಿ ₹5.5 ಕೋಟಿ ನಗದು, ₹7.8 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ…!

ಬೆಂಗಳೂರು : ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಹಾಗೂ ಇತರ ಅಧಿಕಾರಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಈ ಬಗ್ಗೆ ಸಮಗ್ರ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಬೆಳಗಾವಿ … Continued

ಅಬಕಾರಿ ಹೆಚ್ಚುವರಿ ಆಯುಕ್ತ-ಸಚಿವ ಸತೀಶ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ … Continued

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ. ದಾಳಿ

ತಿರುವನಂತಪುರಂ/ಹೊಸದೆಹಲಿ: ಕೇರಳ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (PMLA) ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರಂ ನಿವಾಸ ಸೇರಿದಂತೆ ಕೇರಳದ ಒಟ್ಟು 12 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ರಾಜಧಾನಿ ತಿರುವನಂತಪುರಂನಲ್ಲಿರುವ ವಿಜಯನ್ ಅವರ ಬಾಡಿಗೆ ಮನೆ ಹಾಗೂ … Continued

ಸೋನಾ ಪಪ್ಪು ಸುಲಿಗೆ ಪ್ರಕರಣ: ಕೋಲ್ಕತ್ತಾ ಡಿಸಿಪಿ ಶಾಂತನು ಸಿನ್ಹಾ ಬಿಸ್ವಾಸ್ ಬಂಧಿಸಿದ ಇ.ಡಿ.

ನವದೆಹಲಿ: ಸುಲಿಗೆ, ಹಣ ವರ್ಗಾವಣೆ ಮತ್ತು ಭೂಕಬಳಿಕೆ ಆರೋಪಗಳನ್ನು ಎದುರಿಸುತ್ತಿರುವ ಹೈಪ್ರೊಫೈಲ್ ಸೋನಾ ಪಪ್ಪು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಗುರುವಾರ ಕೋಲ್ಕತ್ತಾ ಉಪ ಪೊಲೀಸ್ ಆಯುಕ್ತ (DCP) ಶಾಂತನು ಸಿನ್ಹಾ ಬಿಸ್ವಾಸ್ ಅವರನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಈ ಹಿಂದೆ ಹಲವು ಬಾರಿ ಸಮನ್ಸ್ ಜಾರಿ … Continued

ಐ-ಪಿಎಸಿ ಪ್ರಕರಣ | ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಬೇಡಿ”: ಮಮತಾಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಸಲಹೆಗಾರರ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ದಾಳಿಯ ವೇಳೆ ಹಸ್ತಕ್ಷೇಪ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವಾದವು ಕೇವಲ ‘ಕೇಂದ್ರ ಮತ್ತು ರಾಜ್ಯದ ನಡುವಿನ ಒಕ್ಕೂಟ ವ್ಯವಸ್ಥೆಯ ವಿವಾದ’ (Federal … Continued

ನ್ಯೂಸ್‌ಕ್ಲಿಕ್, ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ. ದಂಡ ವಿಧಿಸಿದ ಇಡಿ

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಗಾಗಿ ಸುದ್ದಿ ಜಾಲತಾಣ ‘ನ್ಯೂಸ್‌ಕ್ಲಿಕ್’ (NewsClick) ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ED) ಸೋಮವಾರ 184 ಕೋಟಿ ರೂಪಾಯಿ ದಂಡ ವಿಧಿಸಿದೆ. ತನಿಖಾ ಸಂಸ್ಥೆಯ ಆದೇಶದ ಪ್ರಕಾರ, ಪೋರ್ಟಲ್‌ನ ಮಾಲೀಕತ್ವ ಹೊಂದಿರುವ ‘ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ … Continued