ಮುಡಾದ ದಟ್ಟಗಳ್ಳಿಯ ಜಮೀನು ಜಪ್ತಿ ಪ್ರಕರಣ | ಆತುರದ ಕ್ರಮಕ್ಕೆ ಮುಂದಾಗುವುದು ಬೇಡ : ಇ.ಡಿ.ಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ದಟ್ಟಗಳ್ಳಿಯಲ್ಲಿರುವ ಜಮೀನನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡಿದ್ದು, ಸದ್ಯ ಈ ಕುರಿತು ಯಾವುದೇ ಆತುರದ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಇ.ಡಿ.ಗೆ ನಿರ್ದೇಶಿಸಿದೆ. ಇ.ಡಿ. ಕ್ರಮದ ವಿರುದ್ಧ … Continued

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶಗೆ ಇ.ಡಿ. ನೋಟಿಸ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ ನೋಟಿಸ್​​ ಜಾರಿ ಮಾಡಿದೆ. ಜ. 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ … Continued

ರಿಯಾಲ್ಟರ್ ಮೇಲಿನ ಪ್ರಕರಣ; ಇ.ಡಿ.ಗೆ 1 ಲಕ್ಷ ರೂ ವೆಚ್ಚ ನೀಡುವಂತೆ ಆದೇಶಿಸಿದ ಕೋರ್ಟ್‌

ಮುಂಬೈ : ರಿಯಾಲ್ಟಿ ಡೆವಲಪರ್ ವಿರುದ್ಧ “ಸರಿಯಾಗಿ ವಿಚಾರ ಮಾಡದೆ” ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಪ್ರಾರಂಭಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ 1 ಲಕ್ಷ ರೂಪಾಯಿ ವೆಚ್ಚ ನೀಡುವಂತೆ ವಿಧಿಸಿದೆ. ಇ.ಡಿ.ಗೆ ದಂಡ ವಿಧಿಸುವಾಗ, ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಏಕ ಪೀಠವು ನಾಗರಿಕರಿಗೆ ಕಿರುಕುಳ ನೀಡದಂತೆ ಕಾನೂನು ಜಾರಿ ಸಂಸ್ಥೆಗಳಿಗೆ “ಬಲವಾದ … Continued

ಮುಡಾ ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಕೊಳ್ಳಲಾಗಿದೆ ಎಂದು ಇ.ಡಿ. (ED) ಟ್ವೀಟ್ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

‌ಪರಾರಿಯಾಗಿರುವ ವಿಜಯ ಮಲ್ಯ, ನೀರವ್ ಮೋದಿಯಿಂದ 15,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿ ವಸೂಲಿ ಮಾಡಿದ ಇ.ಡಿ.

ನವದೆಹಲಿ: ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯಗೆ ಸೇರಿದ್ದ ₹ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ತಿಳಿಸಿದ್ದಾರೆ. ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ₹ 22,280 … Continued

ಮುಡಾ ಹಗರಣದ ತನಿಖೆ ಚುರುಕು : ಬೆಂಗಳೂರು ಸೇರಿ ರಾಜ್ಯದ 9 ಕಡೆ ‘ಇ.ಡಿ.’ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸೋಮವಾರ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರುಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಮುಂಜಾನೆಯೇ ರಾಜ್ಯದ 9 ಕಡೆ … Continued

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ … Continued

ಮಹಾದೇವ ಬೆಟ್ಟಿಂಗ್ ಅಪ್ಲಿಕೇಶನ್‌ ಪ್ರಕರಣ : ನಟಿ ತಮನ್ನಾ ಭಾಟಿಯಾ ಪ್ರಶ್ನಿಸಿದ ಇ.ಡಿ.

ಗುವಾಹತಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿದ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಗುರುವಾರ ಗುವಾಹತಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಿದ್ದರು. ಅಕ್ರಮ ಬೆಟ್ಟಿಂಗ್ ಕಾರ್ಯಾಚರಣೆಗಳಿಗಾಗಿ ತನಿಖಾ ಸಂಸ್ಥೆಗಳಿಂದ ಪರಿಶೀಲನೆಗೆ ಒಳಪಟ್ಟಿರುವ ಮಹದೇವ ಆನ್‌ಲೈನ್ ಗೇಮಿಂಗ್‌ನ ಅಂಗಸಂಸ್ಥೆ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ವೀಕ್ಷಣೆಯನ್ನು … Continued

ಮನೆ ತೆರವಿಗೆ ಇ.ಡಿ.ಯಿಂದ ನೋಟಿಸ್: ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಳೆದ ತಿಂಗಳು, ಈ ಆಪಾದಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮುಂಬೈನ ಜುಹು ಪ್ರದೇಶದಲ್ಲಿನ ಅವರ ವಸತಿ ಆವರಣ ಮತ್ತು ಪಾವ್ನಾ ಸರೋವರದ ಬಳಿಯ ಫಾರ್ಮ್‌ಹೌಸ್‌ಗಳನ್ನುತಾತ್ಕಾಲಿಕವಾಗಿ ಲಗತ್ತಿಸಿದ ನಂತರ … Continued