ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued

ಮುಡಾ ಹಗರಣ ​: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇ.ಡಿ.ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ … Continued

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ರಾಹುಲ್ ನವೀನ ನೇಮಕ

ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ.) ಹಂಗಾಮಿ ಮುಖ್ಯಸ್ಥ ರಾಹುಲ್ ನವೀನ ಅವರನ್ನು ಈಗ ಪೂರ್ಣಾವಧಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಹೊರಡಿಸಿದ ಆದೇಶದಲ್ಲಿ ಆದಾಯ ತೆರಿಗೆ ಕೇಡರ್‌ನ 1993-ಬ್ಯಾಚ್‌ನ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ರಾಹುಲ್‌ ನವೀನ ಅವರನ್ನು “ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಇ.ಡಿ. ನಿರ್ದೇಶಕರ ಹುದ್ದೆ … Continued

ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued

ಇ.ಡಿ., ಸಿಬಿಐ ಎರಡೂ ಪ್ರಕರಣಗಳಲ್ಲಿ ಮನೀಶ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಪಿಪಿ) ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ಹೂಡಿದ್ದ ಪ್ರಕರಣಗಳೆರಡರಲ್ಲೂ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ … Continued

ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧದ ಎಫ್​ಐಆರ್​ ಗೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ವಿರುದ್ಧದ ತನಿಖೆ ನಡೆಸುವುದಕ್ಕೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ವಾಲ್ಮೀಕಿ ನಿಗಮ ಹಗರಣಕ್ಕೆ ಟ್ವಿಸ್ಟ್‌ : ಈಗ ಇ.ಡಿ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲು… !

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಇತರ ಕೆಲವರನ್ನು ಹೆಸರಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಜಾರಿ ನಿರ್ದೇನಾಲಯ ಇಬ್ಬರು ಅಧಿಕಾರಿಗಳಾದ ಮಿತ್ತಲ್ ಹಾಗೂ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ … Continued

ದೆಹಲಿ ಮದ್ಯ ನೀತಿ ಪ್ರಕರಣ : ಅರವಿಂದ ಕೇಜ್ರಿವಾಲಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರಿದ್ದ ಪೀಠವು ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ ಎತ್ತಿರುವ ಕೆಲವು … Continued

ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ಮಾಜಿ ಸಚಿವ ಹಾಗೂ ಶಾಸಕ ನಾಗೇಂದ್ರ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ … Continued

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪಿಎ ಹರೀಶನನ್ನು ಬುಧವಾರ ವಶಕ್ಕೆ ಶಾಂತಿನಗರದ ಇ.ಡಿ. ಕಚೇರಿಗೆ ಕರೆತಂದಿದ್ದಾರೆ ಎಂದು … Continued