ಇ.ಡಿ. ಬಂಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇ.ಡಿ. ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ಇ.ಡಿ.ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಕಲ್ಕತ್ತಾ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇದೇ ವೇಳೆ ನ್ಯಾಯಮೂರ್ತಿಗಳಾದ … Continued

ಇ.ಡಿ.ಸಮನ್ಸ್‌ಗೆ ಡೋಂಟ್‌ ಕೇರ್‌ : ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಪದೇಪದೇ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು … Continued

ಸಂದೇಶಖಾಲಿ ಪ್ರಕರಣ : 12 ಕೋಟಿ ರೂ. ಮೌಲ್ಯದ ಷಹಜಹಾನ್ ಶೇಖ್ ಆಸ್ತಿ ಜಪ್ತಿ ಮಾಡಿದ ಇ.ಡಿ.

ಕೋಲ್ಕತ್ತಾ : ಈಗ ಅಮಾನತಾಗಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಗೆ ಸೇರಿದ 12.78 ಕೋಟಿ ರೂ.ಮೌಲ್ಯದ ಚರ ಮತ್ತು ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮಂಗಳವಾರ ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ಈ ಆಸ್ತಿಯಲ್ಲಿ ಅಪಾರ್ಟ್‌ಮೆಂಟ್, ಕೃಷಿ ಭೂಮಿ, ಮೀನುಗಾರಿಕೆಗೆ ಭೂಮಿ ಮತ್ತು ಕಟ್ಟಡದಂತಹ 14 ಸ್ಥಿರ ಆಸ್ತಿಗಳು … Continued

ಡಿಕೆ ಶಿವಕುಮಾರಗೆ ಬಹುದೊಡ್ಡ ರಿಲೀಫ್‌..: ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಜಾಗೊಳಿಸಿದೆ. ಈ ಪ್ರಕರಣವು ತೆರಿಗೆ ವಂಚನೆ ಮತ್ತು ಕೋಟ್ಯಂತರ ಮೌಲ್ಯದ ಹವಾಲಾ ವ್ಯವಹಾರದ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣಕ್ಕೆ … Continued

ಇ.ಡಿ. ಸಮನ್ಸ್‌ ನೀಡಿದರೆ ಹಾಜರಾಗಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ.) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಪಿಎಂಎಲ್ಎಯ ಸೆಕ್ಷನ್ 50 ರ ಪ್ರಕಾರ, ತನಿಖೆಯ ಅಗತ್ಯವಿದೆ ಎಂದು ಪರಿಗಣಿಸುವ ಯಾವುದೇ … Continued

‘ಹೈಕೋರ್ಟ್‌ಗೆ ಹೋಗಿ’: ಬಂಧನದ ವಿರುದ್ಧ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಭೂ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ, ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ, ಎಂ.ಎಂ. ಸುಂದರೇಶ ಮತ್ತು ಬೇಲಾ ಎಂ ತ್ರಿವೇದಿ … Continued